ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ.

ಪరీక్షೆ ಮುಗಿದ ಕೇವಲ 3 ಗಂಟೆಗಳಲ್ಲಿ ಆರು ವಿಭಾಗಗಳ ಉತ್ತರಪತ್ರಿಕೆ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸುವ ಮೂಲಕ ವಿಶ್ವವಿದ್ಯಾಲಯ ತನ್ನ ಆಡಳಿತ ಮತ್ತು ಕಾರ್ಯಪಟುತೆಯನ್ನು ಸಾಬೀತುಪಡಿಸಿದೆ.

ಮೌಲ್ಯಮಾಪನಕ್ಕೆ ಹೊಸ ಚೈತನ್ಯ ತುಂಬಿದ ಕುಲಸಚಿವ ಡಾ. ಶಿವಶಂಕರ್

ಇತ್ತಿಚೆಗಷ್ಟೇ ಮೌಲ್ಯಮಾಪನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದ ಡಾ. ಕೆ. ಶಿವಶಂಕರ್ ಅವರ ಕಾರ್ಯನಿಷ್ಠತೆ, ಯೋಜನೆ ಮತ್ತು ಸಿಬ್ಬಂದಿಯನ್ನು ಪ್ರೇರೇಪಿಸುವ ಶೈಲಿ ಮೌಲ್ಯಮಾಪನ ವಿಭಾಗಕ್ಕೆ ಹೊಸ ಚಲನೆಯನ್ನು ತಂದಿದೆ.
2024–25ನೇ ಸಾಲಿನ 2ನೇ ಮತ್ತು 4ನೇ ಚತುರ್ಮಾಸಿಕ ಪರೀಕ್ಷೆಗೆ ಮುನ್ನವೇ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸುವ ಗುರಿ ನಿಗದಿಪಡಿಸಿದ ಡಾ. ಶಿವಶಂಕರ್ ಅವರು ಅದಕ್ಕೆ ತಕ್ಕಂತೆ ಕ್ರಿಯಾ ಯೋಜನೆ ರೂಪಿಸಿ ಉಪನ್ಯಾಸಕರನ್ನು ಸಜ್ಜುಗೊಳಿಸಿದ್ದರು.

ಅದರಂತೆ ಉಪನ್ಯಾಸಕರು ಪರೀಕ್ಷೆ ಮುಗಿದ ದಿನವೇ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿದರು. ಮೌಲ್ಯಮಾಪನ ಸಿಬ್ಬಂದಿಯೂ ತಕ್ಷಣವೇ ಅಂಕಗಳನ್ನು ಯುಯುಸಿಎಂಎಸ್ (UU CMS) ತಂತ್ರಾಂಶದಲ್ಲಿ ದಾಖಲಿಸಿದರು.

3 ಗಂಟೆಗಳಲ್ಲಿ ಪ್ರಕಟವಾದ ಫಲಿತಾಂಶ

ಪರೀಕ್ಷೆ ಬರೆಯುತ್ತಿದ್ದ ಜನಪದ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಕನ್ನಡ ಮತ್ತು ಜನಪದ, ಎಂ.ಬಿ.ಎ RTM, ಎಂ.ಬಿ.ಎ ಪ್ರವಾಸೋದ್ಯಮ ವಿಭಾಗಗಳ ದ್ವಿತೀಯ ಸೆಮಿಸ್ಟರ್ ಫಲಿತಾಂಶ ಹಾಗೂ ಎಂ.ಎ ಜನಪದ ವಿಜ್ಞಾನ ವಿಭಾಗದ ದ್ವಿತೀಯ ಮತ್ತು ಚतुರ್ಥ ಸೆಮಿಸ್ಟರ್ ಫಲಿತಾಂಶ ಪರೀಕ್ಷೆಯ 3 ಗಂಟೆಗಳಲ್ಲಿ ಪ್ರಕಟಿಸಲಾಯಿತು.

ಈ ಬಾರಿ ಒಟ್ಟು 460 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಕುಲಪತಿಗಳ ಶ್ಲಾಘನೆ

ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಅವರು ಈ ಸಾಧನೆಯನ್ನು ಶ್ಲಾಘಿಸಿ,
“ಪರೀಕ್ಷೆ ಮುಗಿದ ದಿನದಂದೇ ಫಲಿತಾಂಶ ಪ್ರಕಟಿಸಿರುವುದು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯ. ಇದು ವಿದ್ಯಾರ್ಥಿ-ಕೇಂದ್ರಿತ ಕಾರ್ಯದ ಸ್ಪಷ್ಟ ಉದಾಹರಣೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕುಲಸಚಿವರ ಪ್ರತಿಕ್ರಿಯೆ

ಡಾ. ಶಿವಶಂಕರ್ ತಿಳಿಸಿದ್ದಾರೆ:
“ಇದು ದಾಖಲೆ ಮಾತ್ರವಲ್ಲ, ವಿಶ್ವವಿದ್ಯಾಲಯದ ಸಾಮರ್ಥ್ಯವನ್ನು ತೋರಿಸುವ ಕೆಲಸ. ಉಪನ್ಯಾಸಕರು ಹಾಗೂ ತಾಂತ್ರಿಕ ಸಿಬ್ಬಂದಿ ಹಗಲಿರುಳು ಶ್ರಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಚುರುಕುತನದಿಂದ ಕೆಲಸ ಮಾಡುವುದಕ್ಕೆ ಇದು ಪ್ರೇರಣೆ.”

ವರದಿ: ನಿಂಗರಾಜ್ ಕುಡಲ್, ಹಾವೇರಿ ಜಿಲ್ಲೆ – ಬಂಕಾಪುರ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

19 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

20 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

24 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago