RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ
ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ..
ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಪುಸ್ತಕದಲ್ಲಿ ತಮ್ಮ ಹೆಸರನ್ನು ಅಚ್ಚಿಳಿಸಿದ್ದಾರೆ.
ಈ ಸಾಧನೆ ಕೇವಲ ವೈಯಕ್ತಿಕ ಜಯವಲ್ಲ, ಅದು ಒಂದು ಗ್ರಾಮದ ಹೆಮ್ಮೆ, ಒಂದು ತಾಯಿಯ ಕನಸಿನ ನಿಜವಾಗುವ ಕ್ಷಣ, ಹಾಗೂ ಯುವತಿಯೊಬ್ಬಳ ಕನಸಿನ ಪರಿಪೂರ್ಣತೆ. ಅರಸಾಳು ಗ್ರಾಮದಲ್ಲಿ ಹುಟ್ಟಿ ಬೆಳೆದ ಕವನಶ್ರೀ, ತಮ್ಮ ನೈಪುಣ್ಯ ಮತ್ತು ಕೌಶಲ್ಯವನ್ನು ಅಂತರರಾಷ್ಟ್ರೀಯ ವೇದಿಕೆಗೆ ಕೊಂಡೊಯ್ದಿದ್ದಾರೆ.
ಇತ್ತೀಚೆಗಷ್ಟೇ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜಯ್ಯ ಟಿ. ಹಾಗೂ ಅರಸಾಳು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮಾವತಿ ಅವರ ಪುತ್ರಿಯಾದ ಕವನಶ್ರೀ ಪ್ರಸ್ತುತ M.Sc. in Fashion Apparel Design ವ್ಯಾಸಂಗ ಮಾಡುತ್ತಿದ್ದಾರೆ.
ಅವರ ಸಾಧನೆ ಕೇಳಿ ಊರಿನ ಜನರು ಹೆಮ್ಮೆಯಿಂದ ಉಸಿರೆಳೆದಿದ್ದಾರೆ. “ಕವನಶ್ರೀ ನಮ್ಮ ಊರಿನ ಕೀರ್ತಿಪತಾಕೆ ಮುಗಿಲೆತ್ತರಕ್ಕೆ ಏರಿಸಿದ್ದಾರೆ” ಎಂದು ಅರಸಾಳು ಗ್ರಾಮಸ್ಥರು ಆನಂದ ವ್ಯಕ್ತಪಡಿಸಿದ್ದಾರೆ. ಶಿಕ್ಷಕ ಮಂಜಯ್ಯ ಅವರ ಸ್ಮರಣೆಯಲ್ಲಿ ಈ ಸಾಧನೆ ಇನ್ನಷ್ಟು ಹೃದಯಮುಟ್ಟುವಂತಾಗಿದೆ — ಏಕೆಂದರೆ ತಂದೆಯ ಪ್ರೋತ್ಸಾಹ, ತಾಯಿಯ ಆಶಯ ಮತ್ತು ಕವನಶ್ರೀಯ ದೃಢಸಂಕಲ್ಪ ಈ ಸಾಧನೆಯ ಹಿಂದಿನ ನಿಜವಾದ ಶಕ್ತಿ.
ಕವನಶ್ರೀಯ ಗಿನ್ನೆಸ್ ದಾಖಲೆ ಕೇವಲ ಒಂದು ಪ್ರಮಾಣಪತ್ರವಲ್ಲ — ಅದು ಸಣ್ಣ ಊರಿನ ಹುಡುಗಿಯೊಬ್ಬಳು ವಿಶ್ವವನ್ನು ಸ್ಪರ್ಶಿಸಬಹುದೆಂಬ ನಂಬಿಕೆಗೆ ಹೊಸ ಬೆಳಕಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…