ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ

ರಿಪ್ಪನ್ ಪೇಟೆ: ಸಮಾಜಮುಖಿ ಕಾರ್ಯಗಳ ಮಾಡುವುದರ ಮೂಲಕ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ, ಜೀವನದ ಒತ್ತಡವನ್ನು ತೊಡೆದು ಹಾಕಲು ಏಕೈಕ ಮಾರ್ಗ ಸಮಾಜ ಸೇವೆ ಎಂದು ರೋಟರಿ ಜಿಲ್ಲಾ 31 82ರ ಜಿಲ್ಲಾ ಗವರ್ನರ್ ಕೆ ಪಾಲಕ್ಷ ಹೇಳಿದರು.

ಪಟ್ಟಣದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸೇವೆಯ ಮನೋಭಾವ ಹೊಂದಿರುವವರಿಗೆ ಮಾತ್ರ ನೆಮ್ಮದಿಯ ಬದುಕನ್ನು ಕಾಣಬಹುದು ಸಮಾಜವು ಸೇವೆಯನ್ನು ಗುರುತಿಸುತ್ತದೆ ಹಾಗೆಯೇ ಸಮಾಜ ಸೇವೆಯನ್ನು ಮಾಡುವ ವ್ಯಕ್ತಿಗಳಿಗೆ ಸಮಾಜ ಸೇವೆಯು ನೆಮ್ಮದಿಯನ್ನು ನೀಡುತ್ತದೆ, ವಿಶ್ವದ 220 ರಾಷ್ಟ್ರಗಳಲ್ಲಿ 11 ಲಕ್ಷಕ್ಕೂ ಅಧಿಕ ರೋಟರಿ ಸದಸ್ಯರು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ ಆರೋಗ್ಯ ಶಿಕ್ಷಣ ಸೇರಿದಂತೆ ಇನ್ನಿತರ ಸಮಾಜಮುಖಿ ಕಾರ್ಯಗಳಲ್ಲಿ ತೊಡಗುವುದರ ಮೂಲಕ ಸಮಾಜಕ್ಕೆ ಕೊಡುಗೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ರೋಟರಿ ಸಂಸ್ಥೆಯ ಮೂಲ ಉದ್ದೇಶ ಆರೋಗ್ಯದ ರಕ್ಷಣೆ ಮತ್ತು ಸಮಾಜ ಸೇವೆಯಾಗಿದೆ ಜಗತ್ತಿನಲ್ಲಿ ಪೋಲಿಯೋ ನಿರ್ಮೂಲನಕ್ಕೆ  ಅತ್ಯಧಿಕ ಆರ್ಥಿಕ ನೆರವು  ನೀಡುವುದರ ಮೂಲಕ   ತನ್ನ ಕೊಡುಗೆಯನ್ನು ನೀಡಿದೆ,   ಮಲೆನಾಡಿನ ಪ್ರಕೃತಿದತ್ತ ನಿಸರ್ಗದ ಮಣ್ಣಿನಲ್ಲಿ ಜನಿಸಿದ ಪ್ರತಿಯೊಬ್ಬರಲ್ಲಿ  ಸೇವಾ ಮನೋಭಾವನೆ ರಕ್ತಗತವಾಗಿ ಬಂದಿದೆ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಆಸಕ್ತಿ ಇರುವ ಪ್ರತಿಯೊಬ್ಬರಿಗೂ ರೋಟರಿ ಸಂಸ್ಥೆಯ ಸದಸ್ಯರಾಗಲು ಅವಕಾಶವಿದೆ ಎಂದರು.

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಅಸಿಸ್ಟೆಂಟ್ ಗವರ್ನರ್ ಎಂ.ಬಿ ಲಕ್ಷ್ಮಣಗೌಡ ಮಾತನಾಡಿ ಪಟ್ಟಣದಲ್ಲಿ ರೋಟರಿ ಸಂಸ್ಥೆ ಸ್ಥಾಪನೆಯಾಗಿ 15 ವರ್ಷಗಳು  ಸಂದಿದೆ, ಆರೋಗ್ಯ, ಶಿಕ್ಷಣ, ಕೃಷಿ, ಕ್ಷೇತ್ರಗಳಿಗೆ ಹೆಚ್ಚು ಆದ್ಯತೆ ನೀಡುವುದರ ಮೂಲಕ  ನಮ್ಮ ರೋಟರಿ ಸಂಸ್ಥೆ ಸಮಾಜ ಸೇವಾ ಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದೆ, ಆರೋಗ್ಯ ತಪಾಸಣಾ ಶಿಬಿರ, ನೇತ್ರ ಚಿಕಿತ್ಸೆ ಮತ್ತು ಕಣ್ಣಿನ ತಪಾಸಣಾ ಶಿಬಿರ ರಕ್ತದಾನ ಶಿಬಿರ, ಶಾಲಾ ಕಾಲೇಜು ಮಕ್ಕಳಿಗೆ ಕೌಶಲ್ಯ ತರಬೇತಿ ಶಿಬಿರ,ನೀಟ್ ಹಾಗೂ ಸಿಇಟಿ ಪರೀಕ್ಷೆಗಳ ಮಾಹಿತಿ ಶಿಬಿರ,  ಸಂಚಾರ ಸುರಕ್ಷತಾ ಕಾರ್ಯಕ್ರಮ, ಶಾಲಾ ಮಕ್ಕಳಿಗೆ ಉಚಿತ ಶೈಕ್ಷಣಿಕ ಪರಿಕರಗಳ ವಿತರಣೆ,ರಕ್ತದಾನ ಶಿಬಿರ, ಕೃಷಿ ಕಾರ್ಮಿಕರಿಗೆ ಉಚಿತ ಕೃಷಿ ಪರಿಕರಗಳ ವಿತರಣೆ, ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳ ವಿತರಣೆ, ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆಗೈದ ನಾಗರಿಕರಿಗೆ ಪುರಸ್ಕಾರ, ಎಸ್ ಎಸ್ ಎಲ್ ಸಿ ದ್ವಿತೀಯ ಪಿಯುಸಿ ಮತ್ತು ಅಂತಿಮ ಪದವಿ ತರಗತಿಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದೊಂದಿಗೆ ನಗದು ವಿತರಣೆ ಸೇರಿದಂತೆ ಅನೇಕ ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಕೃಷ್ಣರಾಜ ಎ ಎಂ ವಹಿಸಿದ್ದರು.

ರೋಟರಿ ವಲಯ 11ರ ವಲಯ ಸೇನೆ ಭರತ್ ಎಂ. ಕೂಡ್ಲು  . ಕಾರ್ಯದರ್ಶಿ ರಾಧಾಕೃಷ್ಣ ಜೆ. ರೋಟರಿ ಜಿಲ್ಲಾ 31 82ರ ಪ್ರಥಮ ಮಹಿಳೆ ಸುರೇಖಾ ಪಾಲಾಕ್ಷ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕೃಷಿ ಕ್ಷೇತ್ರದಲ್ಲಿ ಸಾಧನೆಗೆ ಕೇಂದ್ರ ಸರ್ಕಾರದ ರಾಷ್ಟ್ರಮಟ್ಟದ ಕೃಷಿ ಪ್ರಶಸ್ತಿ ಪಡೆದ ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ, ಸಹಕಾರಿ ಕ್ಷೇತ್ರದ ಸೇವೆಗೆ ರಾಜ್ಯಮಟ್ಟದ ಸೇವಾ ಸಹಕಾರಿ ಪ್ರಶಸ್ತಿ ಪಡೆದ ಎಂ ಪರಮೇಶ್, ಸಮಾಜ ಸೇವೆಗಾಗಿ ಸುನಂದ,ಗಿನ್ನಿಸ್ ದಾಖಲೆ ಮಾಡಿದ ಕವನಶ್ರೀ , ಶಿಕ್ಷಣ ಕ್ಷೇತ್ರದ ಸಾಧನೆಗೆ ಐಶ್ವರ್ಯ ಡಾಕಪ್ಪ ಕ್ರೀಡೆ ಕ್ಷೇತ್ರದ ಸಾಧನೆಗೆ ಪಂಚಮಿಯ ರವಿಶಂಕರ್ ರವರಿಗೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಗವರ್ನರ್ ಕೆ ಪಾ ಲಕ್ಷ ಸನ್ಮಾನಿಸಿ ಗೌರವಿಸಿದರು.

ಸವಿತಾ ರಾಧಾಕೃಷ್ಣ ಮತ್ತು ಅಮಿತ್ ಬಲ್ಲಾಳ್ ಪ್ರಾರ್ಥಿಸಿದರು. ಕಾರ್ಯದರ್ಶಿ ರವೀಂದ್ರ ಬಲ್ಲಾಳ್ ವರದಿ ವಾಚನ ಮಾಡಿ,ಗಣೇಶ್ ಆರ್, ಸಬಾಸ್ಟಿನ್, ಎಂಬಿ ಮಂಜುನಾಥ್ ನಿರೂಪಿಸಿ ರಾಧಾಕೃಷ್ಣ ಜೆ ವಂದಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

10 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago