ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!??
ಶಿವಮೊಗ್ಗ: ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಹುಟ್ಟಿಸುವ ಘಟನೆ ನಡೆದಿದ್ದು, ಮನೆಯ ಬಾಗಿಲು ಮುರಿದು ಅತಿಕ್ರಮ ಪ್ರವೇಶ ಮಾಡಿ ವಾಮಾಚಾರದ ಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಘಟನೆ ಅಕ್ಟೋಬರ್ 31, 2025 ರಂದು ಮಧ್ಯಾಹ್ನ 1ರಿಂದ 2ರ ನಡುವಿನ ಸಮಯದಲ್ಲಿ ನಡೆದಿದೆ. ದೂರುದಾರ ಮಹಿಳೆಯು ಮನೆಯಲ್ಲಿ ಇರದ ಸಮಯದಲ್ಲಿ, ಕೆಲವರು ಬಾಗಿಲು ಮುರಿದು ಮನೆಗೆ ನುಗ್ಗಿ, ಒಳಗಿದ್ದ ಸಾಮಾನುಗಳನ್ನು ನಾಶಮಾಡಿದ್ದಾರೆ ಎನ್ನಲಾಗಿದೆ.
ಆರೋಪಿಗಳು ಕಬ್ಬಿಣದ ರಾಡ್ ಬಳಸಿ ಮನೆಯ ಬೀರು ಮುರಿದು, ಸಿಮೆಂಟ್ ಶೀಟ್ ಪುಡಿ ಮಾಡಿ ಹಾನಿ ಮಾಡಿದ್ದಾರೆ. ಬಳಿಕ ನಿಂಬೆ ಹಣ್ಣು, ಕುಂಕುಮ, ಅಡಿಕೆ ಎಲೆ ಹಾಗೂ 11 ರೂಪಾಯಿ ಇಟ್ಟು ಹೋಗಿದ್ದು, ಇದು ವಾಮಾಚಾರದ ಕೃತ್ಯ ಎಂದು ಶಂಕಿಸಲಾಗಿದೆ.
ಘಟನೆಯ ವೇಳೆ ಪಕ್ಕದ ಮನೆಯವರು ದೂರುದಾರರಿಗೆ ಕರೆಮಾಡಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ಅವರು ತಕ್ಷಣ ಮನೆಗೆ ಧಾವಿಸಿದ್ದಾರೆ. ಬಳಿಕ ಕೃತ್ಯಕ್ಕೆ ಕಾರಣರಾದ ವ್ಯಕ್ತಿ ಹಾಗೂ ಅವರ ಕುಟುಂಬವನ್ನು ಪ್ರಶ್ನಿಸಿದಾಗ, ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ದೂರುದಾರ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…