Breaking
12 Jan 2026, Mon

RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು

RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು

ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಜ ಸಾವು ಎಂದು ದೂರು ದಾಖಲಾಗಿದೆ.

ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದು , ಅಡಿಕೆ ತೋಟದಲ್ಲಿ ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದ ಘಟನೆ ನಡೆದಿತ್ತು ಆದರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಆಕಸ್ಮಿಕ ಸಹಜ ಸಾವು ಎಂಬ ಅಂಶ ಪತ್ತೆಯಾಗಿದ್ದು ಅದರ ಆಧಾರದಡಿಯಲ್ಲಿ ಎಫ್ ಐ ಆರ್ ದಾಖಾಲಾಗಿದೆ.

ದೂರಿನಲ್ಲೇನಿದೆ..!!??

ಮೃತ ಮಂಜುನಾಥ್ ಗವಟೂರು ಗ್ರಾಮದ ಜಗದೀಶ್ ಎಂಬುವವರ ತೋಟಕ್ಕೆ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದು ಮಧ್ಯಾಹ್ನ ಸಮಯದಲ್ಲಿ ಮನೆಗೆ ಕರೆ ಮಾಡಿ ಊಟ ಮಾಡಿದ್ದೇನೆ ಯಾಕೋ ಕೆಲಸ ಮಾಡಲು ಆಗುತ್ತಿಲ್ಲ ಮನೆಗೆ ಬರುತ್ತೇನೆ ಎಂದು ಹೇಳಿದ್ದಾನೆ.ಆ ನಂತರ ಮಧ್ಯಾಹ್ನ 3.45 ಕ್ಕೆ ಮಂಜುನಾಥ್ ಪೋನ್ ನಿಂದ ಪತ್ನಿಗೆ ಕರೆ ಮಾಡಿ ನಿಮ್ಮ ಯಜಮಾನರು ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿಸಿದ್ದು ಕೂಡಲೇ ಆಸ್ಪತ್ರೆಗೆ ತೆರಳಿ ನೋಡಿದಾಗ ಮಾತನಾಡುತ್ತಿರಲಿಲ್ಲ ಕೂಡಲೇ ಜೊತೆಯಲ್ಲಿದ್ದವರನ್ನು ಕೇಳಿದಾಗ ಮಂಜುನಾಥ್ ಊಟ ಮುಗಿಸಿ ಅಡಿಕೆ ಮರದ ಕೆಳಗೆ ಮಲಗಿದ್ದು ನಾವೆಲ್ಲಾ ಅಡಿಕೆ ಕೊನೆ ಕೊಯ್ಯುತಿದ್ದು ಆ ನಂತರ ಮಂಜುನಾಥ್ ಎದ್ದು ಕೆಲಸದ ಕಡೆಗೆ ಬರುವಾಗ ಅಡಿಕೆ ಖಾನೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕಾಲುವೆಯ ಕೆಸರಿನಲ್ಲಿ ಬಿದ್ದಿದ್ದು ಬಾಯಲ್ಲಿ ನೊರೆ ಬಂದಿತ್ತು ಕೂಡಲೇ ಆಸ್ಪತ್ರೆಗೆ ಕರೆತಂದೆವು ಎಂದಿದ್ದಾರೆ.ಅಡಿಕೆ ತೋಟದ ಕಾಲುವೆಯ ಕೆಸರಿಗೆ ಬಿದ್ದು ಉಸಿರಾಡಲು ಆಗದೇ ಮೃತಪಟ್ಟಿದ್ದಾರೆ ಬೇರೆ ಯಾವುದೇ ಕಾರಣವಿರುವುದಿಲ್ಲ ಹಾಗೂ ಯಾರ ಮೇಲೆಯೂ ಅನುಮಾನವಿರುವುದಿಲ್ಲ ಎಂದು ಮೃತ ಮಂಜುನಾಥ್ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಜುನಾಥ್ ಮರಣೋತ್ತರ ಪರೀಕ್ಷೆ ನಡೆಯಿತು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version