RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ
ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ.
ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ.
ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ ಬೆಳಗ್ಗೆ ಕುಟುಂಬದವರು ತಮ್ಮ ಕೆಲಸಗಳಲ್ಲಿ ತೊಡಗಿದ್ದಾಗ, ಕಿರಣ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲುಗಳನ್ನು ಒಳಗಿನಿಂದ ಹಾಕಿಕೊಂಡಿರುವುದು ಗಮನಕ್ಕೆ ಬಂದಿದೆ. ಬಾಗಿಲು ತೆರೆಯದೇ ಇರುವುದರಿಂದ ಕುಟುಂಬಸ್ಥರು ಮನೆಯ ಅಂಚು ತೆಗೆದು ಒಳಗೆ ನೋಡಿದಾಗ, ಕಿರಣ ಕೊಠಡಿಯ ಮೇಲ್ಚಾವಣಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ.
ಕಿರಣನು ಹೊಟ್ಟೆ ನೋವಿನಿಂದ ಬೇಸತ್ತು “ಸಾಯುವುದು ಒಳ್ಳೆಯದು” ಎಂದು ಪದೇಪದೇ ಹೇಳುತ್ತಿದ್ದನು ಎಂದು ಕುಟುಂಬದವರು ದೂರಿನಲ್ಲಿ ತಿಳಿಸಿದ್ದಾರೆ. ಬೇರೆ ಯಾವುದೇ ವೈಮನಸ್ಯ ಅಥವಾ ಸಮಸ್ಯೆ ಇರಲಿಲ್ಲ ಎಂದು ಅವರು ಹೇಳಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…