RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ
ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ.
ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ.
ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ ಬೆಳಗ್ಗೆ ಕುಟುಂಬದವರು ತಮ್ಮ ಕೆಲಸಗಳಲ್ಲಿ ತೊಡಗಿದ್ದಾಗ, ಕಿರಣ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲುಗಳನ್ನು ಒಳಗಿನಿಂದ ಹಾಕಿಕೊಂಡಿರುವುದು ಗಮನಕ್ಕೆ ಬಂದಿದೆ. ಬಾಗಿಲು ತೆರೆಯದೇ ಇರುವುದರಿಂದ ಕುಟುಂಬಸ್ಥರು ಮನೆಯ ಅಂಚು ತೆಗೆದು ಒಳಗೆ ನೋಡಿದಾಗ, ಕಿರಣ ಕೊಠಡಿಯ ಮೇಲ್ಚಾವಣಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ.
ಕಿರಣನು ಹೊಟ್ಟೆ ನೋವಿನಿಂದ ಬೇಸತ್ತು “ಸಾಯುವುದು ಒಳ್ಳೆಯದು” ಎಂದು ಪದೇಪದೇ ಹೇಳುತ್ತಿದ್ದನು ಎಂದು ಕುಟುಂಬದವರು ದೂರಿನಲ್ಲಿ ತಿಳಿಸಿದ್ದಾರೆ. ಬೇರೆ ಯಾವುದೇ ವೈಮನಸ್ಯ ಅಥವಾ ಸಮಸ್ಯೆ ಇರಲಿಲ್ಲ ಎಂದು ಅವರು ಹೇಳಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…