ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
young-woman-who-went-to-college-goes-missing-police-appeal-for-help-in-finding-her
ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್ಗೆ ಹೋಗುವುದಾಗಿ ನ. 10 ರಂದು ಹೊರಟವಳು ಕಾಣೆಯಾಗಿದ್ದಾಳೆ.
ಈಕೆಯ ಚಹರೆ 5 ಅಡಿ ಎತ್ತರ, ದೃಢವಾದ ಮೈಕಟ್ಟು, ದುಂಡುಮುಖ,ಎಣ್ಣೆ ಕಪ್ಪು ಮೈ ಬಣ್ಣ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಎಡ ತುಟಿಯ ಮೇಲ್ಭಾಗ ರಾಗಿ ಕಾಳು ಗಾತ್ರದ ಕಪ್ಪುಮಚ್ಚೆ ಇರುತ್ತದೆ. ಕನ್ನಡ ಮಾತನಾಡಲು, ಓದಲು ಬರೆಯಲು ತಿಳಿದಿದ್ದು, ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಚೂಡಿದಾರ್ ಬಿಳಿ ಬಣ್ಣದ ವೇಲ್ ಧರಿಸಿರುತ್ತಾಳೆ ಹಾಗೂ ಒಂದು ಕಪ್ಪು ಬಣ್ಣದ ಸ್ಕೂಲ್ ಬ್ಯಾಗ್ ತೆಗೆದುಕೊಂಡು ಹೋಗಿರುತ್ತಾಳೆ.
ಈ ಯುವತಿಯ ಪತ್ತೆಯಾದಲ್ಲಿ ಎಸ್.ಪಿ. ಶಿವಮೊಗ್ಗ -08182-261400, ಡಿವೈಎಸ್ಪಿ ತೀರ್ಥಹಳ್ಳಿ 08181 – 220388, ಸಿಪಿಐ ಮಾಳೂರುವೃತ್ತ :- 9480803333/ಪಿಎಸ್ಐ ಆಗುಂಬೆ ರವರಿಗೆ :- 9480803314, ಕಂಟ್ರೋಲ್ ರೂ ಶಿವಮೊಗ್ಗ – 9480803300, ಇವರುಗಳನ್ನು ಸಂಪರ್ಕಿಸಿ ಮಾಹಿತಿಯನ್ನು ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
young-woman-who-went-to-college-goes-missing-police-appeal-for-help-in-finding-her
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…