ಆನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ
ಶಿವಮೊಗ್ಗ – ಆನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ.
ಈ ಸಂಬಂಧ ಸಂತ್ರಸ್ತ ವ್ಯಕ್ತಿ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹುಂಚದ ಕಟ್ಟೆಯ ನಿವಾಸಿಯೊಬ್ಬರು ಆನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗಾಗಿ ಹುಡುಕಾಡುತ್ತಿದ್ದಾಗ, ಅವರಿಗೆ ‘PLANETSPARK’ ಎಂಬ ಕಂಪನಿಯ ಜಾಹೀರಾತು ಸಿಕ್ಕಿದೆ. ಆ ಜಾಹೀರಾತಿನ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ, ಕಂಪನಿಯ ಹೋಂ ಪೇಜ್ ಓಪನ್ ಆಗಿದ್ದು, ಅವರು ತಮ್ಮ ವೈಯಕ್ತಿಕ ಮಾಹಿತಿ ಹಾಗೂ OTP ನೀಡಿ ರಿಜಿಸ್ಟರ್ ಆಗಿ ಲಾಗಿನ್ ಮಾಡಿದ್ದಾರೆ.ನವೆಂಬರ್ 30, 2025 ರಂದು ಮಧ್ಯಾಹ್ನ 12:30 ಕ್ಕೆ ಡೆಮೊ ತರಗತಿ ತೆಗೆದುಕೊಳ್ಳಲು ಪ್ರೊಸೆಸಿಂಗ್ ಫೀಜ್ ಪಾವತಿಸಬೇಕು ಎಂದು ವಂಚಕರು ತಿಳಿಸಿದ್ದು, ಅದಕ್ಕಾಗಿ ನೀಡಿದ QR ಕೋಡ್ಗೆ ದೂರುದಾರರು 5,000 ಹಣವನ್ನು ಹಾಕಿರುತ್ತಾರೆ. ತದನಂತರ, ಅಪರಿಚಿತ ಮೊಬೈಲ್ ನಂಬರ್ನಿಂದ ಅವರ ಪತ್ನಿಯ ಮೊಬೈಲ್ಗೆ ಕರೆ ಮಾಡಿ ತರಗತಿಗಳ ಬಗ್ಗೆ ಮಾಹಿತಿ ನೀಡಲಾಗಿದೆ.
ಆದರೆ, ತರಗತಿಗಳು ಇಷ್ಟವಾಗದ ಕಾರಣ ದೂರುದಾರರು ಕಂಪನಿಯ ಕಸ್ಟಮರ್ ಜಿ-ಮೇಲ್ ಹಾಗೂ ಮೊಬೈಲ್ ನಂಬರ್ಗೆ ಕರೆ ಮಾಡಿ ಹಣವನ್ನು ವಾಪಸ್ಸು ನೀಡಬೇಕೆಂದು ಕೇಳಿದ್ದಾರೆ. ಆದರೆ ಅವರಿಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ನಂತರ, ಅವರ ಪತ್ನಿಯ ಮೊಬೈಲ್ಗೆ ಅಪರಿಚಿತ ನಂಬರ್ನಿಂದ ಕರೆ ಬಂದಿದ್ದು, ತರಗತಿಗಳನ್ನು ನಿಲ್ಲಿಸಲಾಗುವುದಿಲ್ಲ ಮತ್ತು ಹಣವನ್ನು ವಾಪಸ್ಸು ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ.
ಡಿಸೆಂಬರ್ 12, 2025 ರಂದು ದೂರುದಾರರು ತಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಅಸಲಿ ವಿಷಯ ಬಯಲಾಗಿದೆ. ನವೆಂಬರ್ 30, 2025 ರಂದು ಲಾಗಿನ್ಗೆ OTP ನೀಡಿದಾಗಲೇ, ದೂರುದಾರರಿಗೆ ತಿಳಿಯದಂತೆ ಅವರ ಮೊಬೈಲ್ ನಂಬರ್ ಬಳಸಿ ಬೇರೊಂದು HDFC ಬ್ಯಾಂಕ್ನಲ್ಲಿ ಲೋನ್ ಖಾತೆಯನ್ನು ತೆರೆದು, ಬರೋಬ್ಬರಿ ₹77,520 ರೂಪಾಯಿಗಳ ಲೋನ್ ಪಡೆದು ವಂಚಿಸಲಾಗಿದೆ.
ಒಟ್ಟಾರೆಯಾಗಿ, PLANETSPARK ಕಂಪನಿಯವರಂತೆ ನಟಿಸಿದ ಸೈಬರ್ ವಂಚಕರು OTP ಪಡೆದುಕೊಂಡು, ಫಿರ್ಯಾದಿಯ ಮೊಬೈಲ್ ನಂಬರ್ ಬಳಸಿ ಲೋನ್ ಖಾತೆ ತೆರೆದು, ಡೆಮೊ ಫೀಸ್ ₹5,000 ಹಾಗೂ ಲೋನ್ ಹಣ ₹77,520 ಸೇರಿ ಒಟ್ಟು ₹82,520 ಹಣವನ್ನು ಮೋಸದಿಂದ ವರ್ಗಾವಣೆ ಮಾಡಿಕೊಂಡು ವಂಚಿಸಿರುವುದು ದೂರಿನಲ್ಲಿ ತಿಳಿದು ಬಂದಿದೆ.
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…