ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ

A haystack caught fire due to an electrical short circuit.

A haystack caught fire due to an electrical short circuit.

A haystack caught fire due to an electrical short circuit.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹುಲಿನ ಬಣವೆ ಹೊತ್ತಿ ಉರಿದ ಘಟನೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಕೆಳಗಿನ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸೇರಿದ ಗದ್ದೆಯಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್ ಹಾಗೂ ಪರಿವರ್ತಕದಿಂದ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಅದರ ಪರಿಣಾಮವಾಗಿ ಗದ್ದೆಯಲ್ಲಿ ಸಂಗ್ರಹಿಸಿಟ್ಟಿದ್ದ ಹುಲ್ಲಿನ ಬಣವೆ ಬೆಂಕಿಗೆ ಆಹುತಿಯಾಗಿದೆ.

ಬೆಂಕಿಯ ಜ್ವಾಲೆಗಳು ವೇಗವಾಗಿ ವ್ಯಾಪಿಸಿದ ಕಾರಣ ಸುತ್ತಮುತ್ತಲಿನ ಹೊಲಗಳು ಹಾಗೂ ವಾಸಸ್ಥಾನಗಳಿಗೆ ಅಪಾಯ ಉಂಟಾಗುವ ಭೀತಿ ಮೂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು,ಗ್ರಾಪಂ ಸಿಬ್ಬಂದಿಗಳು , ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು , ಗ್ರಾಮಸ್ಥರ ಸಹಕಾರದೊಂದಿಗೆ ಬೆಂಕಿ ನಂದಿಸಲು ಪ್ರಯತ್ನಿಸಿದರು. ನೀರು ಹಾಗೂ ಮಣ್ಣನ್ನು ಬಳಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಘಟನೆ ನಡೆದ ಸುತ್ತಲೂ ನೀರು ಹರಿಸಿ ಮುಂದಾಗುವ ಅನಾಹುತವನ್ನು ತಪ್ಪಿಸಿದರು.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಪರಮೇಶ್ವರ್ , ಉಮೇಶ್ ,ಕಂದಾಯ ಇಲಾಖೆಯ ಸಿಬ್ಬಂದಿಗಳಾದ ಮಂಜುನಾಥ್ , ಪ್ರವೀಣ್ ,ಮೆಸ್ಕಾಂ ಇಲಾಖೆಯ ಪ್ರಜ್ವಲ್ , ಕೃಷ್ಣಕುಮಾರ್ , ಮಲ್ಲಪ್ಪ ಗ್ರಾಪಂ ಸಿಬ್ಬಂದಿಗಳಾದ ನಾಗೇಶ್ , ರಾಜೇಶ್ ಮತ್ತು ಅಗ್ನಿಶಾಮಕ ದಳದ ಠಾಣಾಧಿಕಾರಿ ಆನಂದಪ್ಪ ಎನ್ ನೇತ್ರತ್ವದ ಸಿಬ್ಬಂದಿಗಳಾದ ರಾಜೇಶ್ ಕೆ ಹೆಚ್ , ರವೀಂದ್ರ ಕೆ , ಮಂಜುನಾಥ್ ಬಿ , ಅಶ್ಪಕ್ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

21 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago