ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4.90 ಲಕ್ಷ ರೂ. ವಂಚನೆ

The true colors of the fraudsters are revealed when they go to withdraw the money after investing it. They harass the victims by giving various excuses like the money is under SEBI control, tax paid, in RD account or broker charges paid. Finally, when they could not withdraw the money and after inquiring among their acquaintances, the victims realized that they had been cheated.

ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4.90 ಲಕ್ಷ ರೂ. ವಂಚನೆ

A person from Shivamogga was cheated of Rs 4.90 lakh in the name of trading.

ಶಿವಮೊಗ್ಗ :  ಸೈಬರ್​ ವಂಚಕರು ಟ್ರೇಡಿಂಗ್​ ಹೆಸರಿನಲ್ಲಿ ಹಣ ಹೂಡಿಕೆ ಮಾಡಲು ಹೇಳಿ ಹಣ ಹೂಡಿಕೆ ಮಾಡಿದ ನಂತರ ವಿವಿಧ ಕಾರಣಗಳನ್ನು ನೀಡಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 4.90 ಲಕ್ಷ ರೂಪಾಯಿ ಹಣವನ್ನು ವಂಚಿಸಲಾಗಿದೆ.

ಈ ಹಿನ್ನೆಲೆ ಶಿವಮೊಗ್ಗದ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚಕರು ಮೊದಲು  ಹರ್ನಿಶ್ ಮಹೇಶ್ ಶುಕ್ಲಾ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡು, ‘Indiaboltplus’ ಮತ್ತು ‘BR JALAN SECURITIES’ ಕಂಪನಿಯ ಹೆಸರನ್ನು ಬಳಸಿಕೊಂಡು ದೂರುದಾರರನ್ನು ನಂಬಿಸಿದ್ದರು. ಪ್ರತಿದಿನ ಮಧ್ಯಾಹ್ನ ಮತ್ತು ಸಂಜೆ ನಿಗದಿತ ಸಮಯದಲ್ಲಿ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಟ್ರೇಡಿಂಗ್ ಬಗ್ಗೆ ತರಬೇತಿ ನೀಡುವ ನಾಟಕವಾಡುತ್ತಿದ್ದರು. ಇದನ್ನು ನಿಜವೆಂದು ನಂಬಿದ ಸಂತ್ರಸ್ತರು, ವಂಚಕರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ-ಹಂತವಾಗಿ NEFT ಮತ್ತು RTGS ಮೂಲಕ ಒಟ್ಟು 4,90,000 ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದರು.

ಹಣ ಹೂಡಿಕೆ ಮಾಡಿದ ನಂತರ ಅದನ್ನು ಹಿಂಪಡೆಯಲು ಹೋದಾಗ ವಂಚಕರ ಅಸಲಿ ಬಣ್ಣ ಬಯಲಾಗಿದೆ. ಹಣವು ಸೆಬಿಯ  ನಿಯಂತ್ರಣದಲ್ಲಿದೆ, ಟ್ಯಾಕ್ಸ್ ಪಾವತಿಸಿ, ಆರ್.ಡಿ ಅಕೌಂಟ್‌ನಲ್ಲಿದೆ ಅಥವಾ ಬ್ರೋಕರ್ ಚಾರ್ಜ್ ಪಾವತಿಸಿ ಎಂದು ಬೇರೆ ಬೇರೆ ನೆಪಗಳನ್ನು ಹೇಳಿ ಹಣ ನೀಡದೆ ಸತಾಯಿಸಿದ್ದಾರೆ. ಕೊನೆಗೆ ಹಣ ವಿತ್‌ಡ್ರಾ ಮಾಡಲು ಸಾಧ್ಯವಾಗದಿದ್ದಾಗ ಮತ್ತು ಪರಿಚಿತರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಸಂತ್ರಸ್ತರಿಗೆ ಅರಿವಾಗಿದೆ.

ಈ ಹಿನ್ನೆಲೆ ಶಿವಮೊಗ್ಗ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

14 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

15 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

15 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

17 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

21 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

21 hours ago