ANANDAPURA | Thieves break temple lock, steal gold locket and cash
ANANDAPURA | ದೇವಸ್ಥಾನದ ಬೀಗ ಮುರಿದು ಬಂಗಾರದ ತಾಳಿ ಹಾಗೂ ನಗದು ದೋಚಿದ ಕಳ್ಳರು
ANANDAPURA | Thieves break temple lock, steal gold locket and cash
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿರಗುಪ್ಪೆ ಗ್ರಾಮದಲ್ಲಿರುವ ಮಾರಿಕಾಂಬಾ ದೇವಾಲಯದಲ್ಲಿ ಕಳ್ಳತನ ಸಂಭವಿಸಿದೆ. ಡಿಸೆಂಬರ್ 22ರ ರಾತ್ರಿ ಈ ಘಟನೆ ನಡೆದಿದ್ದು, ದೇಗುಲದ ಬೀಗ ಮುರಿದು ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳನ್ನು ದೋಚಿದ್ದಾರೆ.
ಮರುದಿನ ಬೆಳಗ್ಗೆ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲು ಬಂದ ಗ್ರಾಮದ ನಿವಾಸಿ ನಾರಾಯಣಗೌಡರು, ಮುಖ್ಯದ್ವಾರದ ಬೀಗ ಮುರಿದಿರುವುದನ್ನು ಗಮನಿಸಿದ್ದಾರೆ. ಕೂಡಲೇ ಒಳಗೆ ಪ್ರವೇಶಿಸಿ ಪರಿಶೀಲಿಸಿದಾಗ ಗರ್ಭಗುಡಿಯ ಬೀಗವನ್ನೂ ಒಡೆದು ಹಾಕಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಗರ್ಭಗುಡಿಯಲ್ಲಿದ್ದ ಮಾರಿಕಾಂಬಾ ದೇವಿಯ ಕುತ್ತಿಗೆಯಲ್ಲಿದ್ದ 12ರಿಂದ 15 ಗ್ರಾಂ ತೂಕದ ಬಂಗಾರದ ತಾಳಿ ಸರದ ಗುಂಡುಗಳನ್ನು ಕಳವು ಮಾಡಿದ್ದಾರೆ. ಜೊತೆಗೆ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು 25 ಸಾವಿರ ರೂ. ನಗದು ಹಣವನ್ನು ಸಹ ದೋಚಿದ್ದಾರೆ. ಒಟ್ಟಾರೆ ಸುಮಾರು 1.35 ಲಕ್ಷ ರೂ. ಮೌಲ್ಯದ ಸ್ವತ್ತು ಕಳ್ಳತನವಾಗಿದೆ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…