ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು
ರಿಪ್ಪನ್ ಪೇಟೆ : ಇಲ್ಲಿನ ಹರತಾಳು ಸಮೀಪದ ಕೋಡ್ರಿಗೆ ಹೊಳೆಯ ಸಮೀಪದ ತಿರುವೊಂದರಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾದ ಹಿನ್ನೆಲೆಯಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಹೆದ್ದಾರಿಪುರ ಸಮೀಪದ ಗಿಣಸೆ ಗ್ರಾಮದ ಮಂಜುನಾಥ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಮೃತ ಮಂಜುನಾಥ್ ಹಾಗೂ ಆತನ ಸ್ನೇಹಿತನಾದ ಲೋಹಿತ್ (29) ಹರತಾಳು ಗ್ರಾಮದಿಂದ ಹೆದ್ದಾರಿಪುರಕ್ಕೆ ಹಿರೋ ಹೊಂಡಾ ಸ್ಪೆಂಡರ್ ಬೈಕ್ ನಲ್ಲಿ ಬರುತಿದ್ದಾಗ ಕ್ವಾಡ್ರಿಗಿ ಹೊಳೆ ಸಮೀಪದ ತಿರುವಿನಲ್ಲಿ ಬೈಕ್ ಸವಾರ ಲೋಹಿತ್ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಅಪ್ಪಳಿಸಿದೆ.ಈ ಘಟನೆಯಲ್ಲಿ ಹಿಂಬದಿ ಕುಳಿತಿದ್ದ ಮಂಜುನಾಥ್ ತಲೆಗೆ ತೀವ್ರ ಪೆಟ್ಟಾದ ಹಿನ್ನಲೆಯಲ್ಲಿ ರಕ್ತಸ್ರಾವವಾಗಿತ್ತು.
ಸ್ಥಳೀಯರು ಕೂಡಲೇ ಇಬ್ಬರನ್ನು ಆಂಬುಲೆನ್ಸ್ ಮೂಲಕ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿ ಕೊಟ್ಟಿದ್ದಾರೆ.ಆದರೆ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಮಂಜುನಾಥ್ ಮೃತಪಟ್ಟಿದ್ದಾರೆ. ಲೋಹಿತ್ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತದೇಹವನ್ನು ಮರಣೋತ್ತರ ಪರೀಕ್ಷಾ ಕೊಠಡಿಯಲ್ಲಿ ಇರಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…