ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ!

ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ!

ಭಯ, ಅವಮಾನ, ಕಿರುಕುಳ… ಕೊನೆಗೆ ಆತ್ಮಹತ್ಯೆ: ಶಿವಮೊಗ್ಗ ಜಿಲ್ಲೆಯ ಮಹಿಳೆಯಯೊಬ್ಬರ ನೋವಿನ ಕಥೆ

Blackmailing colleague’s wife – Woman commits suicide due to constable threat! | Silent soul seeking justice!

Shivamogga Police Case | Woman Suicide | Police Blackmail Allegation

ಜನಸಾಮಾನ್ಯರ ರಕ್ಷಣೆಗಾಗಿ ಇರುವ ಪೊಲೀಸ್ ವ್ಯವಸ್ಥೆಯೊಳಗೇ ಇಂತಹ ಭಯಾನಕ ಘಟನೆ ನಡೆದರೆ ಸಮಾಜ ತಲೆತಗ್ಗಿಸಲೇಬೇಕು. ರಕ್ಷಕನೇ ಭಕ್ಷಕನಾದಾಗ ಏನಾಗುತ್ತದೆ ಎಂಬುದಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಈ ಘಟನೆ ಕಹಿ ಉದಾಹರಣೆಯಾಗಿದೆ. ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಎಂಬ ನುಡಿಗಟ್ಟಿಗೆ ತಕ್ಕಂತೆ, ಪೊಲೀಸ್ ಸಿಬ್ಬಂದಿಯೊಬ್ಬನ ಕಿರುಕುಳದಿಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಗಂಭೀರ ಆರೋಪ ಇದೀಗ ಬಹಿರಂಗವಾಗಿದೆ.

ಏನಿದು ಭದ್ರಾವತಿಯಲ್ಲಿನ ಭೀಕರ ಘಟನೆ?

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರ ಪತ್ನಿಯೇ ಈ ಪ್ರಕರಣದ ಬಲಿಯಾಗಿದ್ದಾರೆ. ಅವರು ಭದ್ರಾವತಿಯ ಹನುಮಂತನಗರ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು.
ಅದೇ ಕ್ವಾರ್ಟರ್ಸ್‌ನ ನೆಲಮಹಡಿಯಲ್ಲಿ ವಾಸವಿದ್ದ ಓಲ್ಡ್ ಟೌನ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಮೌನೇಶ್ ಶೀಕಲ್, ತನ್ನ ಸಹೋದ್ಯೋಗಿಯ ಪತ್ನಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಮಾನಸಿಕ ಕಿರುಕುಳ ಮಾತ್ರವಲ್ಲದೆ ದೈಹಿಕ ಹಿಂಸೆಯೂ ನಡೆದಿತ್ತು ಎಂಬ ಆರೋಪಗಳು ಕೇಳಿಬಂದಿವೆ.

ಕಿರುಕುಳದ ಒತ್ತಡಕ್ಕೆ ಮಹಿಳೆ ಆತ್ಮಹತ್ಯೆ

ನಿರಂತರ ಕಿರುಕುಳದಿಂದ ಮಾನಸಿಕವಾಗಿ ಕುಗ್ಗಿದ್ದ ಮಹಿಳೆ, ಕಳೆದ ನವೆಂಬರ್ 6ರಂದು ಪೊಲೀಸ್ ಕ್ವಾರ್ಟರ್ಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕುಟುಂಬಕ್ಕೆ ಮಾತ್ರವಲ್ಲ, ಪೊಲೀಸ್ ಇಲಾಖೆಯಲ್ಲೂ ಆಘಾತ ಮೂಡಿಸಿತ್ತು.

ಮೊಬೈಲ್‌ಲೇ ಹೊರ ತಂದ ಸತ್ಯ

ಪತ್ನಿಯ ಅಕಾಲಿಕ ಸಾವಿನಿಂದ ಕಂಗೆಟ್ಟಿದ್ದ ಪತಿ, ಆಕೆಯ ಸಾವಿನ ಹಿಂದಿರುವ ಕಾರಣವನ್ನು ಹುಡುಕಲು ಮುಂದಾದರು. ಈ ವೇಳೆ ಪತ್ನಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಅಚ್ಚರಿಯ ಸತ್ಯ ಹೊರಬಂದಿದೆ. ಕಾನ್‌ಸ್ಟೇಬಲ್ ಮೌನೇಶ್ ಶೀಕಲ್ ಆಗಸ್ಟ್ 20ರಿಂದಲೇ ಮಹಿಳೆಗೆ ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಅಂಶಗಳು ಮೊಬೈಲ್ ಸಂದೇಶಗಳಲ್ಲಿ ಪತ್ತೆಯಾಗಿವೆ.
ಮೃತ ಮಹಿಳೆ ಈ ವಿಚಾರವನ್ನು ತಾಯಿಯೊಂದಿಗೆ ಹಂಚಿಕೊಂಡಿದ್ದರೂ, ಪತಿ ಪೊಲೀಸ್ ಆಗಿರುವ ಕಾರಣ ಅವಮಾನ ಮತ್ತು ಭಯದಿಂದ ವಿಷಯ ತಿಳಿಸಲು ಆಗಲಿಲ್ಲ ಎಂಬ ನೋವಿನ ಸಂಗತಿ ಬೆಳಕಿಗೆ ಬಂದಿದೆ.

ದೂರು, ಬಂಧನ ಮತ್ತು ಸಾರ್ವಜನಿಕ ಆಕ್ರೋಶ

ಪತ್ನಿಯ ಸಾವಿಗೆ ತನ್ನದೇ ಇಲಾಖೆಯ ಸಿಬ್ಬಂದಿ ಕಾರಣ ಎನ್ನುವ ಸತ್ಯ ತಿಳಿಯುತ್ತಿದ್ದಂತೆ, ಪತಿ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಿಎನ್‌ಎಸ್ ಹಾಗೂ ಐಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿ ಕಾನ್‌ಸ್ಟೇಬಲ್ ಮೌನೇಶ್ ಶೀಕಲ್‌ನನ್ನು ಬಂಧಿಸಿದ್ದಾರೆ.

ಈ ಘಟನೆ ಪೊಲೀಸ್ ಇಲಾಖೆ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲೂ ಭಾರೀ ಸಂಚಲನ ಮೂಡಿಸಿದ್ದು, ಮಹಿಳೆಯ ಸಾವಿಗೆ ಕಾರಣವಾದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.

ಸಮಾಜದ ಮುಂದೆ ನಿಂತ ಕಠಿಣ ಪ್ರಶ್ನೆ

ಕಾನೂನು ರಕ್ಷಕರೇ ಕಾನೂನು ಮುರಿದರೆ, ಸಾಮಾನ್ಯ ಜನರ ಭದ್ರತೆ ಎಲ್ಲಿ? ಎಂಬ ಪ್ರಶ್ನೆ ಇದೀಗ ಸಮಾಜದ ಮುಂದೆ ನಿಂತಿದೆ. ಈ ಪ್ರಕರಣ ನ್ಯಾಯಾಂಗದ ಮೂಲಕ ತ್ವರಿತವಾಗಿ ಸತ್ಯಾಂಶ ಬಯಲಿಗೆ ಬರಬೇಕು ಮತ್ತು ಮಹಿಳೆಗೆ ನ್ಯಾಯ ದೊರಕಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

48 minutes ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

5 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

6 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

7 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

23 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

1 day ago