ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ
Brother arrested for murdering younger brother and burying him in garden, suspected of having an immoral relationship with sister-in-law
ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ
Brother arrested for murdering younger brother and burying him in garden, suspected of having an immoral relationship with sister-in-law
ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ
ಸೊರಬ: ಮೂರು ತಿಂಗಳ ಹಿಂದೆ ನಡೆದಿದ್ದ ಭೀಕರ ಕೊಲೆ ಪ್ರಕರಣವನ್ನು ಸೊರಬ ಪೊಲೀಸರು ಭೇದಿಸಿ, ಮಂಗಳವಾರ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಕಾನಕೊಪ್ಪ ಹೊಸೂರು ಗ್ರಾಮದ ಮಾಲತೇಶ್ (35) ಬಂಧಿತನಾಗಿದ್ದಾನೆ.
ಪೊಲೀಸರ ಮಾಹಿತಿ ಪ್ರಕಾರ, ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಮಾಲತೇಶ್ ತನ್ನ ತಮ್ಮ ರಾಮಚಂದ್ರ (28)ನನ್ನು ಯೋಜಿತವಾಗಿ ಹತ್ಯೆ ಮಾಡಿ, ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯ ಜೇಡಗೇರಿ ಸಮೀಪದ ತೋಟವೊಂದರಲ್ಲಿ ಹೂತು ಹಾಕಿದ್ದಾನೆ.
ರಾಮಚಂದ್ರ ಸುಮಾರು ಒಂದೂವರೆ ತಿಂಗಳಿನಿಂದ ಮನೆಗೆ ಮರಳದ ಹಿನ್ನೆಲೆ ಪೋಷಕರು ಸೆಪ್ಟೆಂಬರ್ 8ರಂದು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಪೊಲೀಸರು ಅನುಮಾನ ಆಧಾರದಲ್ಲಿ ಮಾಲತೇಶ್ನನ್ನು ವಿಚಾರಣೆ ನಡೆಸಿದಾಗ, ಆತ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿಯ ಮಾಹಿತಿ ಮೇರೆಗೆ ಜೇಡಗೇರಿ ಸಮೀಪದ ತೋಟದಲ್ಲಿ ಹೂತು ಹಾಕಲಾಗಿದ್ದ ರಾಮಚಂದ್ರನ ಮೃತದೇಹವನ್ನು ಮಂಗಳವಾರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಮಾಲತೇಶ್ ತನ್ನ ಪತ್ನಿಯೊಂದಿಗೆ ಸಲುಗೆ ಇರಬೇಡ ಎಂದು ತಮ್ಮನಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ರಾಮಚಂದ್ರ ಅದನ್ನು ಕಡೆಗಣಿಸಿದ್ದಾನೆ ಎಂದು ತಿಳಿಸಿದ್ದಾರೆ. ಇದೇ ಕಾರಣಕ್ಕೆ ಸುಮಾರು ತಿಂಗಳ ಹಿಂದೆಯೇ ಕೊಲೆಗಾಗಿ ಪೂರ್ವಯೋಜನೆ ರೂಪಿಸಿದ್ದ ಮಾಲತೇಶ್, ಮದುವೆ ಮಾಡಿಸುವ ನೆಪದಲ್ಲಿ ಸ್ವಾಮೀಜಿಯ ಪೂಜೆ ಎಂದು ನಂಬಿಸಿ, ಕೊನೆಗೆ ಮಂಜುನಾಥ್ ಎಂಬುವರಿಗೆ ಸೇರಿದ ತೋಟಕ್ಕೆ ಕರೆಸಿ ಮದ್ಯಪಾನ ಮಾಡಿಸಿ ಕೈಕಾಲು ಕಟ್ಟಿ ಕೊಲೆ ಮಾಡಿದ್ದಾನೆ. ಬಳಿಕ ಮೊದಲೇ ತೋಡಿದ್ದ ಗುಂಡಿಯಲ್ಲಿ ಶವವನ್ನು ಹೂತು, ಮರುದಿನ ಕೆಲಸಗಾರರ ಮೂಲಕ ಗುಂಡಿಯನ್ನು ಸಂಪೂರ್ಣ ಮುಚ್ಚಿಸಿದ್ದಾನೆ.
ಆಶ್ಚರ್ಯಕರವಾಗಿ, ನಂತರ ಖುದ್ದಾಗಿ ಪೊಲೀಸ್ ಠಾಣೆಗೆ ಬಂದು ತಮ್ಮ ಕಾಣುತ್ತಿಲ್ಲ ಎಂದು ದೂರು ನೀಡಿದ್ದ ಆರೋಪಿ, ತನಿಖೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಸೊರಬ ಪೊಲೀಸರ ಕಾರ್ಯವನ್ನು ಎಸ್ಪಿ ಮಿಥುನ್ ಕುಮಾರ್ ಪ್ರಶಂಸಿಸಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…