ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |
2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

Durga Devi Jatra Mahotsav in Topina from tomorrow |
Various religious-cultural programs till January 5, 2026

ಬಂಕಾಪುರ:ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮುನವಳ್ಳಿ–ಬಂಕಾಪುರ ಪಟ್ಟಣದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವವು ಡಿಸೆಂಬರ್ 30ರಿಂದ 2026ರ ಜನವರಿ 5ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆಗಳನ್ನು ದೇವಸ್ಥಾನ ಆವರಣದಲ್ಲಿ ಮಂಗಳವಾರ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ದೇವಸ್ಥಾನ ಸೇವಾ ಸಮಿತಿ ಕಾರ್ಯದರ್ಶಿ ಬಸವರಾಜ್ ಕೂಲಿ, ಉತ್ತರ ಕರ್ನಾಟಕದ ಬಹುದೊಡ್ಡ ಜಾತ್ರೆಗಳಲ್ಲೊಂದಾದ ತೋಪಿನ ದುರ್ಗಾದೇವಿ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಲ್ಲದೇ ಹೊರ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದರು. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಜಾತ್ರೆಯನ್ನು ಅಚ್ಚುಕಟ್ಟಾಗಿ ಹಾಗೂ ಶಿಸ್ತಿನಿಂದ ನಡೆಸಲು ಸೇವಾ ಸಮಿತಿ ಸದಸ್ಯರು ಸಂಪೂರ್ಣ ಸನ್ನದ್ಧರಾಗಬೇಕು ಎಂದು ಮನವಿ ಮಾಡಿದರು. ಮಹಾತ್ಮ ಗಾಂಧೀಜಿಯವರ ತತ್ವಸಿದ್ಧಾಂತದಂತೆ ಯಾವುದೇ ಪ್ರಾಣಿ ಹಿಂಸೆಗೆ ಅವಕಾಶ ನೀಡದೆ ಸಾತ್ವಿಕ ರೀತಿಯಲ್ಲಿ ಜಾತ್ರೆಯನ್ನು ಆಚರಿಸಬೇಕು ಎಂದು ಅವರು ಹೇಳಿದರು.
ಸಮಿತಿ ಮುಖಂಡ ಉಮೇಶ್ ಅಂಗಡಿ ಮಾತನಾಡಿ, ಜಾತ್ರೆಯ ವೇಳೆ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ದೂರದೂರಿನಿಂದ ಆಗಮಿಸುವ ಭಕ್ತರು ಹಾಗೂ ಕುಸ್ತಿಪಟುಗಳಿಗೆ ಊಟ-ಉಪಹಾರದ ವ್ಯವಸ್ಥೆಯಲ್ಲಿ ಯಾವುದೇ ಕೊರತೆ ಆಗದಂತೆ ಸೇವಾ ಕಾರ್ಯಕರ್ತರು ನಿಗಾ ವಹಿಸಬೇಕು. ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಜವಾಬ್ದಾರಿಯುತವಾಗಿ ನಡೆಸಬೇಕು ಎಂದು ಸಲಹೆ ನೀಡಿದರು.

ಸಭೆಗೆ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಲಿಂಗನಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಹನುಮಂತಪ್ಪ ಹಳವಳ್ಳಿ, ಅರ್ಚಕರಾದ ಸುಮಂತ್ ಪೂಜಾರ್, ಲಕ್ಷ್ಮಣ ಪೂಜಾರ್ ಸೇರಿದಂತೆ ಪ್ರತಾಪ್ ಸಿಂಗ್ ಶಿವಪ್ಪನವರ್, ಸೋಮನಗೌಡ ಪಾಟೀಲ್, ಬಾಪು ಗೌಡ್ರು ಪಾಟೀಲ್, ಗದಿಗಯ್ಯ ಹಿರೇಮಠ, ರಾಮಚಂದ್ರಪ್ಪ ಪುಕಾಳೆ, ಬಸವಣ್ಣಪ್ಪ ತೋಟದ್, ಗುರುಪಾದಪ್ಪ ಕಿವುಡನವರ್, ವೀರಪ್ಪ ನಾಗನೂರು, ಪ್ರಕಾಶ್ ಹಂಡೆ, ಮಲ್ಲಪ್ಪ ಕಡಹಳ್ಳಿ, ಮಾಲತೇಶ್ ಮನವಳ್ಳಿ, ರಾಮನಗೌಡ ಪಾಟೀಲ್, ದೇವೇಂದ್ರಪ್ಪ ಹಳವಳ್ಳಿ, ಶಂಕ್ರಣ್ಣ ಕಟಗಿ, ಶಂಭಣ್ಣ ಕುರುಗೋಡಿ, ಭರತ್ ಚವ್ವಿ, ಬಾಬುರಾವ್ ಹಂಡೆ, ಹರೀಶ್ ಭವಾನಿ ಸೇರಿದಂತೆ ಬಿಸನಹಳ್ಳಿ, ಮುನವಳ್ಳಿ, ಬಂಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಮತ್ತು ದೇವಸ್ಥಾನ ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವರದಿ: ನಿಂಗರಾಜ್ ಕೂಡಲ
ಬಂಕಾಪುರ, ಹಾವೇರಿ ಜಿಲ್ಲೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

12 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

12 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

12 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

15 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

19 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

19 hours ago