ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ

Eggs do not contain carcinogenic substances, they are safe to consume: FSSAI clarifies

Eggs do not contain carcinogenic substances, they are safe to consume: FSSAI clarifies

Eggs do not contain carcinogenic substances, they are safe to consume: FSSAI clarifies

Eggs do not contain carcinogenic substances, they are safe to consume: FSSAI clarifies

ನವದೆಹಲಿ: ದೇಶದಲ್ಲಿ ಲಭ್ಯವಿರುವ ಮೊಟ್ಟೆಗಳ ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹೇಳಿದೆ.

ಮೊಟ್ಟೆಗಳು ಕ್ಯಾನ್ಸರ್​ ಅಪಾಯನ್ನು ಹೊಂದಿದೆ ಎಂಬ ಇತ್ತೀಚಿನ ಹೇಳಿಕೆಗಳು ತಪ್ಪು ಮಾಹಿತಿಗಳಿಂದ ಕೂಡಿದ್ದು, ಇದಕ್ಕೆ ಯಾವುದೇ ಬೆಂಬಲವಿಲ್ಲ, ಇದು ಅನಗತ್ಯವಾಗಿ ಸಾರ್ವಜನಿಕರಲ್ಲಿ ಭೀತಿ ಮೂಡಿಸುವ ಯತ್ನವಾಗಿದೆ ಎಂದು ಎಫ್​ಎಸ್​ಎಸ್​ಎಐ ಸ್ಪಷ್ಟಪಡಿಸಿದೆ.

ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಮೆಟಾಬಾಲೈಟ್‌ಗಳು (ಎಒಜೆಡ್​)ಗಳಂತಹ ಕ್ಯಾನ್ಸರ್​ಕಾರಕ ಪದಾರ್ಥಗಳಿವೆ ಎಂಬ ಮಾಧ್ಯಮ ವರದಿ ಮತ್ತು ಸಾಮಾಜಿನ ಮಾಧ್ಯಮ ಪೋಸ್ಟ್​ಗಳನ್ನು ಅಲ್ಲಗಳೆದಿರುವ ಎಫ್​ಎಸ್​ಎಸ್​​ಎಐ ಅಧಿಕಾರಿಗಳು, ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಮಾಲಿನ್ಯಕಾರಕಗಳು, ವಿಷಗಳು ಮತ್ತು ಉಳಿಕೆಗಳು) ನಿಯಮಗಳು, 2011ರ ಅಡಿ ಕೋಳಿ ಮತ್ತು ಮೊಟ್ಟೆಗಳ ಉತ್ಪಾದನೆಯ ಎಲ್ಲಾ ಹಂತಗಳಲ್ಲಿ ನೈಟ್ರೋಫ್ಯೂರಾನ್‌ಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ನೈಟ್ರೋಫ್ಯೂರಾನ್ ಮೆಟಾಬಾಲೈಟ್‌ಗಳಿಗೆ ನಿಯಂತ್ರಕ ಜಾರಿಗಾಗಿ 1.0 ಯುಜಿ/ಕೆಜಿಯ ಬಾಹ್ಯ ಶೇಷ ಮಿತಿಯನ್ನು (ಇಎಂಆರ್​ಎಲ್​) ನಿಗದಿಪಡಿಸಲಾಗಿದೆ. ಇದನ್ನು ಕನಿಷ್ಠ ಮಿತಿಯಲ್ಲಿ ಸುಧಾರಿತ ಪ್ರಯೋಗಾಲಯ ವಿಧಾನಗಳಿಂದ ಪತ್ತೆ ಮಾಡಬಹುದಾಗಿದೆ. ಹಾಗೆಂದ ಮಾತ್ರಕ್ಕೆ ಇದರ ಬಳಕೆಗೆ ಅನುಮತಿಸಲಾಗಿದೆ ಎಂಬ ಸೂಚನೆಯಲ್ಲ ಎಂದರು.

ಇಎಂಆರ್​ಎಲ್​ ಕನಿಷ್ಠ ಪ್ರಮಾಣದ ಅವಶೇಷಗಳ ಪತ್ತೆ ಆಹಾರ ಸುರಕ್ಷತೆಯ ಉಲ್ಲಂಘನೆಯಾಗುವುದಿಲ್ಲ. ಇದು ಯಾವುದೇ ಆರೋಗ್ಯ ಅಪಾಯವನ್ನು ಸೂಚಿಸುವುದಿಲ್ಲ ಎಂದಿದ್ದಾರೆ. ಭಾರತದಲ್ಲಿ ಅಂತಾರಾಷ್ಟ್ರೀಯ ಮಾನದಂಡದೊಂದಿಗೆ ನಿಯಂತ್ರಣಗಳನ್ನು ರೂಪಿಸಲಾಗಿದೆ. ಯುರೋಪಿಯನ್ ದೇಶ ಮತ್ತು ಅಮೆರಿಕ ಈ ನ್ಯೂಟ್ರೋಫ್ಯೂರಾನ್​ ಪ್ರಾಣಿಗಳ ಉತ್ಪಾದಕ ವಸ್ತುಗಳ ಬಳಕೆಯನ್ನು ನಿರ್ಬಂಧಿಸಿದೆ

ದೇಶಾದ್ಯಂತ ಸಂಖ್ಯಾತ್ಮಕ ಮಾನದಂಡಗಳಲ್ಲಿನ ವ್ಯತ್ಯಾಸಗಳು ವಿಶ್ಲೇಷಣಾತ್ಮಕ ಮತ್ತು ನಿಯಂತ್ರಕ ವಿಧಾನಗಳಲ್ಲಿನ ವ್ಯತ್ಯಾಸಗಳನ್ನು ಪ್ರತಿಬಿಂಬಿಸುತ್ತವೆ. ಗ್ರಾಹಕ ಸುರಕ್ಷತಾ ಮಾನದಂಡಗಳಲ್ಲಿನ ವ್ಯತ್ಯಾಸಗಳಲ್ಲಿ ಅಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

17 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

18 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

22 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

24 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago