ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

The deceased has been identified as Puttaswamy (52). He was electrocuted and died on the spot when the doti he was using while harvesting the last of the areca nuts in an acquaintance’s areca nut plantation accidentally touched an electric wire.

ಶಿವಮೊಗ್ಗ : ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಸ್ಪರ್ಶವಾದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹೊಸನಗರ ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಪುಟ್ಟಸ್ವಾಮಿ (52) ಎಂದು ಗುರುತಿಸಲಾಗಿದ್ದು, ಅವರು ಪರಿಚಯಸ್ಥರ ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ವೇಳೆ ಬಳಸುತ್ತಿದ್ದ ದೋಟಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಘಟನೆಯ ವೇಳೆ ಅವರ ಜೊತೆಗೆ ಕೆಲಸ ಮಾಡುತ್ತಿದ್ದ ರವಿ ಶೆಟ್ಟಿ (35) ಅವರು ಪುಟ್ಟಸ್ವಾಮಿಯನ್ನು ರಕ್ಷಿಸಲು ಮುಂದಾದಾಗ ಅವರಿಗೆ ಸಹ ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಕುರಿತು ಸಂಬಂಧಪಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

3 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

4 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

4 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

8 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

9 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

9 hours ago