ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು
Vinod, who was seriously injured in the stabbing, died on the spot. Police said that the accused Vikram fled the scene after the incident.
ಶಿವಮೊಗ್ಗ: ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ.
ವಿನೋದ್ ಹಾಗೂ ವಿಕ್ರಮ್ ಎಂಬವರು ಪರಸ್ಪರ ಸ್ನೇಹಿತರಾಗಿದ್ದು, ಮಲವಗೊಪ್ಪದ ಬಳಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿದೆ. ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು ಜಗಳಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ವಿಕ್ರಮ್ ತನ್ನ ಬಳಿ ಇದ್ದ ಚಾಕುವಿನಿಂದ ವಿನೋದ್ ಮೇಲೆ ಮನಬಂದಂತೆ ಇರಿದು ದಾಳಿ ನಡೆಸಿದ್ದಾನೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ವಿನೋದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆ ಬಳಿಕ ಆರೋಪಿ ವಿಕ್ರಮ್ ಸ್ಥಳದಿಂದ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…