ನೈಜೀರಿಯಾ ಗಿಫ್ಟ್ ಹೆಸರಿನಲ್ಲಿ ವಂಚನೆ – 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

Fraud in the name of Nigeria Gift – Man loses Rs 2.80 lakh

ನೈಜೀರಿಯಾ ಗಿಫ್ಟ್ ಹೆಸರಿನಲ್ಲಿ ವಂಚನೆ – 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

A person from Shikaripur received a call from an unknown person, who introduced himself as an ‘officer from the Mumbai Customs Department’ and said that he had received a valuable gift from Nigeria. He assured him that he would have to pay service charges and taxes to release it.

ಶಿವಮೊಗ್ಗ: ಗಿಫ್ಟ್ ಬರಲಿದೆ ಎಂಬ ಆಸೆಯನ್ನು ಬಂಡವಾಳ ಮಾಡಿಕೊಂಡು ವಂಚಕರು ಶಿಕಾರಿಪುರದ ವ್ಯಕ್ತಿಯೊಬ್ಬರಿಂದ 2,80,590 ರೂ ಹಣವನ್ನು ಕಳೆಸಿರುವ ಘಟನೆ ಬೆಳಕಿಗೆ ಬಂದಿದೆ.

ಸೆಪ್ಟೆಂಬರ್ 26 ರಂದು ಶಿಕಾರಿಪುರದ ವ್ಯಕ್ತಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಕರೆ ಮಾಡಿದವನು ತಾನು ‘ಮುಂಬೈ ಕಸ್ಟಮ್ಸ್ ಇಲಾಖೆಯ ಅಧಿಕಾರಿ’ ಎಂದು ಪರಿಚಯಿಸಿಕೊಂಡು ನಿಮಗೆ ನೈಜೀರಿಯಾದಿಂದ ಬೆಲೆಬಾಳುವ ಗಿಫ್ಟ್ ಬಂದಿದೆ. ಅದನ್ನು ಬಿಡುಗಡೆಗೊಳಿಸಲು ಸರ್ವೀಸ್ ಚಾರ್ಜ್ ಹಾಗೂ ತೆರಿಗೆ ಪಾವತಿಸಬೇಕೆಂದು ನಂಬಿಸಿದ್ದಾನೆ.

ವಂಚಕನ ಮಾತುಗಳನ್ನು ನಿಜವೆಂದು ನಂಬಿದ ದೂರುದಾರರು, ಮನೆಯವರೊಂದಿಗೆ ಚರ್ಚಿಸಿ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 2 ರವರೆಗೆ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 2,80,590 ರೂ ಹಣವನ್ನು ವರ್ಗಾಯಿಸಿದ್ದಾರೆ.

ಇಷ್ಟಕ್ಕೂ ತೃಪ್ತರಾಗದ ವಂಚಕರು, ನಂತರ ಮತ್ತೆ ಕರೆ ಮಾಡಿ ಸರ್ವೀಸ್ ಚಾರ್ಜ್ ಹೆಸರಿನಲ್ಲಿ ಇನ್ನೂ 2,95,499 ರೂ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ದೂರುದಾರರಿಗೆ ಅನುಮಾನ ಉಂಟಾಗಿ ಅಕ್ಕಪಕ್ಕದವರೊಂದಿಗೆ ವಿಚಾರಿಸಿದಾಗ ತಾವು ವಂಚನೆಗೆ ಒಳಗಾಗಿರುವುದು ತಿಳಿದುಬಂದಿದೆ.


ಈ ಹಿಂದೆ ಶಿವಮೊಗ್ಗದ ಶ್ರೀರಾಮಪುರದ ಮಹಿಳೆಯೊಬ್ಬರಿಗೂ ಇದೇ ರೀತಿಯಲ್ಲಿ ಗಿಫ್ಟ್ ಆಸೆ ತೋರಿಸಿ 2.35 ಲಕ್ಷ ರೂ ವಂಚಿಸಲಾಗಿದ್ದ ಪ್ರಕರಣ ವರದಿಯಾಗಿತ್ತು. ಗಿಫ್ಟ್ ಹೆಸರಿನಲ್ಲಿ ನಡೆಯುತ್ತಿರುವ ಈ ರೀತಿಯ ವಂಚನೆಗಳು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ಸಲಹೆ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

17 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

19 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

20 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

20 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

20 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

2 days ago