BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ?

Good News for BPL Card Applicants | Distribution of BPL Ration Card Starts – How to Get It?

BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ?

Good News for BPL Card Applicants | Distribution of BPL Ration Card Starts – How to Get It?

Good News for BPL Card Applicants | Distribution of BPL Ration Card Starts – How to Get It?

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್‌ಗಾಗಿ ಸಲ್ಲಿಸಲಾದ ಅರ್ಜಿದಾರರಿಗೆ ದೊಡ್ಡ ಗುಡ್ ನ್ಯೂಸ್ ಲಭಿಸಿದೆ. ಹೊಸದಾಗಿ ಬಂದ 3.96 ಲಕ್ಷ ಅರ್ಜಿಗಳ ಪೈಕಿ 2.95 ಲಕ್ಷ ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಈ ಮೂಲಕ ಕಳೆದ ಎರಡು ವರ್ಷಗಳಿಂದ ಬಿಪಿಎಲ್ ರೇಷನ್ ಕಾರ್ಡ್‌ಗಾಗಿ ಕಾಯುತ್ತಿದ್ದವರಿಗೆ ನಿರೀಕ್ಷಿತ ಸಂತಸ ಸಿಕ್ಕಿದೆ.

ಬಿಪಿಎಲ್ ಕಾರ್ಡ್ ಪಡೆಯುವ ವಿಧಾನ

ಅರ್ಜಿದಾರರು ತಮ್ಮ ತಾಲೂಕು ಕಚೇರಿಯ ಆಹಾರ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬೇಕು.ಜಿಲ್ಲಾ ಕೇಂದ್ರ ಅಥವಾ ನಗರ ವ್ಯಾಪ್ತಿಯವರು ಆಹಾರ ಇಲಾಖೆ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಅನುಮೋದನೆಯ ಸ್ಥಿತಿಯನ್ನು ಪರಿಶೀಲಿಸಬಹುದು.ಅವಶ್ಯಕ ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಸ್ಥಳದಲ್ಲಿಯೇ ರೇಷನ್ ಕಾರ್ಡ್ ಪಡೆಯುವ ಅವಕಾಶ ಇರುತ್ತದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ತಿಂಗಳಲ್ಲಿ ಸಂಪೂರ್ಣ ಪ್ರಕ್ರಿಯೆ

ಸುವರ್ಣ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು,
ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆಹಚ್ಚಿ ಎಪಿಎಲ್‌ಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ಕೂಡ ಮುಂದುವರಿದಿದೆ.
ಅದೇ ವೇಳೆ ಅರ್ಹರಿಗೆ ತ್ವರಿತವಾಗಿ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ ಎಂದರು.

ಹೊಸ ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ತೀರ್ಮಾನ

ಜನಸಂಖ್ಯೆಗೆ ಅನುಗುಣವಾಗಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯುವ ಘೋಷಣೆಯನ್ನು ಸರ್ಕಾರ ಬಜೆಟ್‌ನಲ್ಲಿ ಮಾಡಿದ್ದು ಅದರಂತೆ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ಈ ತಿಂಗಳ ಅಂತ್ಯದೊಳಗೆ ಸಭೆ ನಡೆಸಿ ಹೊಸ ಅಂಗಡಿಗಳ ಆರಂಭ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಹೊಸ ಒಳ ಮೀಸಲಾತಿ ಅನ್ವಯ 3,517 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ನ್ಯಾಯಬೆಲೆ ಅಂಗಡಿ ಪರವಾನಗಿ ಲಭಿಸಲಿದೆ.ರಾಜ್ಯದ ಯಾವುದೇ ಭಾಗದಲ್ಲೂ ಆಹಾರ ಧಾನ್ಯ ಕೊರತೆ ಉಂಟಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ಬಿಪಿಎಲ್ ಕಾರ್ಡ್ ಅರ್ಜಿ ಸ್ಥಿತಿ, ದಾಖಲೆಗಳು ಹಾಗೂ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಅರ್ಜಿದಾರರು ತಾಲೂಕು ಆಹಾರ ಕಚೇರಿ, ಜಿಲ್ಲಾ ಆಹಾರ ಇಲಾಖೆ ಅಥವಾ ಸೇವಾ ಕೇಂದ್ರಗಳನ್ನು (ಸೇವಾ ಸಿಂಧು / ಗ್ರಾಮ ಒನ್) ಸಂಪರ್ಕಿಸಬಹುದು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

15 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

15 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

15 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

16 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

24 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

2 days ago