Groom dies of heart attack just one day after wedding
ಮದುವೆಯಾದ ಒಂದೇ ದಿನಕ್ಕೆ ಮದುಮಗ ಹೃದಯಾಘಾತದಿಂದ ಸಾವು
Groom dies of heart attack just one day after wedding
ಶಿವಮೊಗ್ಗ: ಮದುವೆಯಾಗಿ ಒಂದೇ ದಿನದಲ್ಲಿ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಭದ್ರಾವತಿ ತಾಲೂಕಿನ ಹನುಮಂತಾಪುರದಲ್ಲಿ ನಡೆದಿದೆ.
ನವವಿವಾಹಿತ ರಮೇಶ್ (28) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹರಪನಹಳ್ಳಿಯ ಬಂಡ್ರಿಯ ಮಧುವನ್ನು ರಮೇಶ್ ಭಾನುವಾರ ಶಿವಮೊಗ್ಗದ ಬಿ.ಹೆಚ್ ರಸ್ತೆ ಗಂಗಾಪ್ರಿಯಾ ಕಲ್ಯಾಣ ಮಂಟಪದಲ್ಲಿ ವಿವಾಹವಾಗಿದ್ದರು. ಸೋಮವಾರ ವಧುವಿನ ಮನೆಗೆ ಮೆರವಣಿಗೆ ಮೂಲಕ ಕರೆದುಕೊಂಡು ಹೋದ ಬಳಿಕ, ದೇವರ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳಿದ ಸಂದರ್ಭದಲ್ಲಿ ರಮೇಶ್ ಅಚಾನಕ್ ಕುಸಿದು ಬಿದ್ದರು.
ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೂ, ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ. ಮಂಗಳವಾರ ಹೊಸಕೊಪ್ಪದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
Groom dies of heart attack just one day after wedding
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…