“ಹೆಂಡತಿಯ ಅನುಮತಿ ಇಲ್ಲದೆ ಕುಡಿದರೆ ಜೈಲು?” – ಹೊಸ ಕಾನೂನು ಬಗ್ಗೆ ವೈರಲ್ ಆಗಿರುವ ಸುದ್ದಿಯ ಸತ್ಯವೇನು?

Amid preparations across the country to welcome the New Year 2026, a legal news has gone viral on social media. The statements, especially regarding husbands who drink alcohol without their wife’s permission, have created confusion among the public.

“ಹೆಂಡತಿಯ ಅನುಮತಿ ಇಲ್ಲದೆ ಕುಡಿದರೆ ಜೈಲು?” – ಹೊಸ ಕಾನೂನು ಬಗ್ಗೆ ವೈರಲ್ ಆಗಿರುವ ಸತ್ಯವೇನು?

“Jail if you drink without your wife’s permission?” – What’s the truth about the new law that’s going viral?

ನವದೆಹಲಿ: 2026ರ ಹೊಸ ವರ್ಷವನ್ನು ಸ್ವಾಗತಿಸಲು ದೇಶಾದ್ಯಂತ ಸಿದ್ಧತೆಗಳು ಜೋರಾಗಿರುವ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ಒಂದು ಕಾನೂನು ಸಂಬಂಧಿತ ಸುದ್ದಿ ವ್ಯಾಪಕವಾಗಿ ವೈರಲ್ ಆಗಿದೆ. ವಿಶೇಷವಾಗಿ ಮದ್ಯಪಾನ ಮಾಡುವ ಗಂಡಂದಿರಿಗೆ ಸಂಬಂಧಿಸಿದಂತೆ “ಪತ್ನಿಯ ಅನುಮತಿಯಿಲ್ಲದೆ ಮದ್ಯ ಸೇವಿಸಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ” ಎಂಬ ಹೇಳಿಕೆಗಳು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿವೆ.

ವೈರಲ್ ಸಂದೇಶಗಳಲ್ಲಿ, ಜುಲೈ 1, 2024ರಿಂದ ಜಾರಿಗೆ ಬಂದಿರುವ ಭಾರತೀಯ ನ್ಯಾಯ ಸಂಹಿತಾ (BNS) 2023ರ ಅಡಿಯಲ್ಲಿ ಈ ರೀತಿಯ ಕಠಿಣ ಶಿಕ್ಷೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ವಾಸ್ತವದಲ್ಲಿ, ಈ ಕಾನೂನು ನಿಬಂಧನೆಯ ಅರ್ಥವನ್ನು ತಪ್ಪಾಗಿ ಸರಳೀಕರಿಸಿ ಪ್ರಚಾರ ಮಾಡಲಾಗುತ್ತಿದೆ ಎಂದು ಕಾನೂನು ತಜ್ಞರು ಸ್ಪಷ್ಟಪಡಿಸಿದ್ದಾರೆ.

BNSನ ಸೆಕ್ಷನ್ 85 (ಹಳೆಯ IPC ಸೆಕ್ಷನ್ 498Aಯ ನವೀಕೃತ ರೂಪ) ಪ್ರಕಾರ, ಪತಿ ಮದ್ಯ ಅಥವಾ ಯಾವುದೇ ಮಾದಕ ವಸ್ತುವಿನ ಪ್ರಭಾವದಲ್ಲಿ ತನ್ನ ಪತ್ನಿಗೆ ದೈಹಿಕ ಅಥವಾ ಮಾನಸಿಕ ಕ್ರೌರ್ಯ ಎಸಗಿದರೆ, ಕಿರುಕುಳ ನೀಡಿದರೆ, ಅವಳ ಸುರಕ್ಷತೆ, ಮಾನಸಿಕ ಶಾಂತಿ ಅಥವಾ ಘನತೆಗೆ ಧಕ್ಕೆಯಾಗುವಂತೆ ವರ್ತಿಸಿದರೆ, ಆ ಸಂದರ್ಭದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದೆ. ಇಂತಹ ಅಪರಾಧಕ್ಕೆ ದಂಡದ ಜೊತೆಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಾನೂನಿನಲ್ಲಿ ಇದೆ.

ಅಂದರೆ, ಕೇವಲ ಮದ್ಯಪಾನ ಮಾಡಿರುವುದರಿಂದಲೇ ಜೈಲು ಶಿಕ್ಷೆ ಆಗುವುದಿಲ್ಲ. ಮದ್ಯದ ಪ್ರಭಾವದಲ್ಲಿ ಜಗಳ, ಹಿಂಸಾಚಾರ, ನಿಂದನೆ ಅಥವಾ ನಿರಂತರ ಕಿರುಕುಳ ನಡೆದರೆ ಮಾತ್ರ ಈ ಸೆಕ್ಷನ್ ಅನ್ವಯವಾಗುತ್ತದೆ. ಪತಿ ಶಾಂತಿಯುತವಾಗಿ ಮದ್ಯಪಾನ ಮಾಡಿ ಯಾವುದೇ ರೀತಿಯ ಹಿಂಸೆ ಅಥವಾ ಕಿರುಕುಳಕ್ಕೆ ಕಾರಣವಾಗದಿದ್ದರೆ, ಈ ಕಾನೂನು ವಿಧಿ ಅನ್ವಯಿಸುವುದಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶದ ಕೌಟುಂಬಿಕ ಹಿಂಸಾಚಾರ ಪ್ರಕರಣಗಳಲ್ಲಿ ಶೇಕಡಾ 40 ಕ್ಕೂ ಹೆಚ್ಚು ಪ್ರಕರಣಗಳಿಗೆ ಮದ್ಯಪಾನ ಪ್ರಮುಖ ಕಾರಣವಾಗಿದೆ. ಈ ಹಿನ್ನೆಲೆ ಮಹಿಳೆಯರಿಗೆ ಬಲವಾದ ಕಾನೂನು ರಕ್ಷಣೆಯನ್ನು ಒದಗಿಸುವ ಉದ್ದೇಶದಿಂದ ಈ ನಿಬಂಧನೆಯನ್ನು ರೂಪಿಸಲಾಗಿದೆ.ಪತ್ನಿಗೆ ಈ ಕಾನೂನಿನ ಅಡಿಯಲ್ಲಿ FIR ದಾಖಲಿಸುವುದು, ಕಾನೂನು ರಕ್ಷಣೆ ಪಡೆಯುವುದು, ಬೇರ್ಪಡುವಿಕೆ ಆದೇಶಕ್ಕೆ ಅರ್ಜಿ ಸಲ್ಲಿಸುವುದು ಅಥವಾ ಪತಿಯ ವಿರುದ್ಧ ಉತ್ತಮ ನಡವಳಿಕೆಯ ಬಾಂಡ್ ವಿಧಿಸಲು ನ್ಯಾಯಾಲಯವನ್ನು ಕೇಳುವ ಹಕ್ಕು ಇದೆ.

ಹೊಸ ವರ್ಷಕ್ಕೂ ಮುನ್ನ ಈ ವಿಷಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, “ಇನ್ನು ಕುಡಿಯುವ ಮೊದಲು ಗಂಡಂದಿರು ತಮ್ಮ ಹೆಂಡತಿಯ ಅನುಮತಿ ಕೇಳಬೇಕಾಗಬಹುದು” ಎಂಬ ತಮಾಷೆಯ ಮಾತುಗಳು ಹರಡುತ್ತಿದ್ದರೂ, ವಾಸ್ತವದಲ್ಲಿ ಈ ಕಾನೂನು ಮದ್ಯಪಾನಕ್ಕೆ ಸಂಪೂರ್ಣ ನಿಷೇಧ ವಿಧಿಸುವುದಲ್ಲ; ಕೌಟುಂಬಿಕ ಹಿಂಸಾಚಾರವನ್ನು ತಡೆಯುವ ಉದ್ದೇಶದಿಂದ ರೂಪಿಸಲಾದ ಕಾನೂನು ಕ್ರಮವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

3 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago