ಆನ್ಲೈನ್ನಲ್ಲಿ 1000 ಬ್ಯಾಗ್ ಸಿಮೆಂಟ್ಗೆ ಆರ್ಡರ್ – 4.15 ಲಕ್ಷ ಕಳೆದುಕೊಂಡ ಸಾಗರದ ವ್ಯಕ್ತಿ
ಶಿವಮೊಗ್ಹ: ಆನ್ಲೈನ್ನಲ್ಲಿ ವಸ್ತುಗಳನ್ನು ತಲುಪಿಸುವ ನೆಪದಲ್ಲಿ ಹಣ ಪಡೆದು ಮೋಸ ಮಾಡುವ ಜಾಲಗಳು ಸಕ್ರಿಯವಾಗಿದ್ದು ಇಂತಹ ವಂಚನೆಗೆ ಸಾಗರದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ಸಿಮೆಂಟ್ ಖರೀದಿಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಕಾಮಗಾರಿ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ 1000 ಬ್ಯಾಗ್ ಸಿಮೆಂಟ್ ಅಗತ್ಯವಿತ್ತು. ಆದರೆ, ಅವರು ಯಾವಾಗಲೂ ಖರೀದಿ ಮಾಡುತ್ತಿದ್ದ ಸಿಮೆಂಟ್ ಅಂಗಡಿಯಲ್ಲಿ ಸ್ಟಾಕ್ ಲಭ್ಯವಿರದ ಕಾರಣ, ಆನ್ಲೈನ್ನಲ್ಲಿ ಖರೀದಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅಪರಿಚಿತ ಆನ್ಲೈನ್ ಕಂಪನಿಯೊಂದರ ಮೊಬೈಲ್ ನಂಬರ್ಗಳು ಲಭ್ಯವಾಗಿವೆ.ಈ ನಂಬರ್ಗಳನ್ನು ಸಂಪರ್ಕಿಸಿದಾಗ, ವಂಚಕರು ಕೋರಮಂಡಲ್ ಕಂಪನಿಯ ಹೆಸರನ್ನು ಬಳಸಿಕೊಂಡು, 1000 ಬ್ಯಾಗ್ ಸಿಮೆಂಟ್ ಕಳುಹಿಸಿಕೊಡುವುದಾಗಿ ಒಪ್ಪಂದ ಮಾಡಿಕೊಂಡಿದ್ದಾರೆ. ಬಳಿಕ ದೂರುದಾರರ ವಾಟ್ಸಾಪ್ಗೆ ಕೊಟೇಶನ್ ಮಾಹಿತಿ ಕಳುಹಿಸಿ, ಒಟ್ಟು ಜಿ.ಎಸ್.ಟಿ. ಸೇರಿ 4,15,000 ಹಣವನ್ನು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಶಾಖೆಯ ಖಾತೆಗೆ ಪೇ ಮಾಡುವಂತೆ ಹೇಳಿದ್ದಾರೆ.
ವಂಚಕರ ಮಾತನ್ನು ನಂಬಿದ ದೂರುದಾರರು ಹಂತ ಹಂತವಾಗಿ 4,15,000 ಪೇ ಮಾಡಿದ್ದಾರೆ. ಆದರೆ ಕೆಲ ದಿನಗಳು ಕಳೆದರೂ ಸಹ ಸಿಮೆಂಟ್ ತಲುಪಲೇ ಇಲ್ಲ. ಇದರಿಮದ ಗಾಬರಿಗೊಂಡ ದೂರುದಾರ ಅವರು ಮೊಬೈಲ್ ನಂಬರ್ಗಳಿಗೆ ಕರೆ ಮಾಡಿದ್ದಾರೆ. ಆಗ ಅವರ ಫೋನ್ಗಳು ಸ್ವಿಚ್ ಆಫ್ ಆಗಿರುವುದು ತಿಳಿದಿದೆ. ಆಗಲೇ ತಾವು ಮೋಸ ಹೋಗಿರುವುದು ಅರಿತುಕೊಂಡ ದೂರುದಾರರು ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…