Police’s massive crackdown on drug addicts: Do you know how many cases were registered in two months?!?
ಮಾದಕ ವ್ಯಸನಿಗಳ ಜಾಲದ ವಿರುದ್ದ ಪೊಲೀಸರ ಭರ್ಜರಿ ಭೇಟೆ : ಎರಡು ತಿಂಗಳಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ..!!??
Police’s massive crackdown on drug addicts: Do you know how many cases were registered in two months?!?
ಶಿವಮೊಗ್ಗ : ಜಿಲ್ಲೆಯಾದ್ಯಂತ ಮಾದಕ ವಸ್ತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆ (ಸ್ಪೆಷಲ್ ಡ್ರೈವ್) ನಡೆಸಿದೆ.
ಈ ಕಾರ್ಯಾಚರಣೆಯಲ್ಲಿ ಒಟ್ಟು 177 ಮಾದಕ ವಸ್ತು ಸಂಬಂಧಿತ ಪ್ರಕರಣಗಳನ್ನು ದಾಖಲಿಸಿ, ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನವೆಂಬರ್ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 82 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಗಾಂಜಾ ಸೇವನೆ ಮಾಡಿದ 76 ಜನ ಆರೋಪಿತರ ವಿರುದ್ಧ NDPS ಕಾಯ್ದೆಯ 27(b) ಸೆಕ್ಷನ್ ಅಡಿ 74 ಪ್ರಕರಣಗಳು ದಾಖಲಾಗಿವೆ. ಜೊತೆಗೆ ಗಾಂಜಾ ಮಾರಾಟ, ಸಾಗಾಟ ಹಾಗೂ ಹಸಿ ಗಾಂಜಾ ಬೆಳೆಯುತ್ತಿದ್ದ 12 ಜನ ಆರೋಪಿತರ ವಿರುದ್ಧ NDPS ಕಾಯ್ದೆಯ 8(c), 20(b), 20(a) ಸೆಕ್ಷನ್ಗಳ ಅಡಿ 8 ಪ್ರಕರಣಗಳು ದಾಖಲಿಸಲಾಗಿದೆ. ಈ ಅವಧಿಯಲ್ಲಿ 4,91,500 ರೂ. ಮೌಲ್ಯದ 4 ಕೆಜಿ 476 ಗ್ರಾಂ ಒಣ ಗಾಂಜಾ, 370 ಗ್ರಾಂ ಹಸಿ ಗಾಂಜಾ ಹಾಗೂ 26 ಗ್ರಾಂ MDMA ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ಸಹ ವಿಶೇಷ ಕಾರ್ಯಾಚರಣೆ ಮುಂದುವರಿದಿದ್ದು, ಒಟ್ಟು 95 ಪ್ರಕರಣಗಳು ದಾಖಲಾಗಿವೆ. ಗಾಂಜಾ ಸೇವನೆ ಮಾಡಿದ 90 ಜನ ಆರೋಪಿತರ ವಿರುದ್ಧ NDPS ಕಾಯ್ದೆಯ 27(b) ಸೆಕ್ಷನ್ ಅಡಿ 86 ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಗಾಂಜಾ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ 15 ಜನ ಆರೋಪಿತರ ವಿರುದ್ಧ NDPS ಕಾಯ್ದೆಯ 8(c), 20(b) ಸೆಕ್ಷನ್ಗಳ ಅಡಿ 9 ಪ್ರಕರಣಗಳು ದಾಖಲಿಸಲಾಗಿದೆ. ಈ ತಿಂಗಳಲ್ಲಿ 4,51,500 ರೂ. ಮೌಲ್ಯದ 8 ಕೆಜಿ 969 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿರ್ಮೂಲನೆಗೆ ಮುಂದೆಯೂ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…