ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ
ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಸ್ಥಿತಿಯನ್ನು ಪರಿಶೀಲಿಸಲು ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ಇಂದು ದಿಡೀರ್ ಭೇಟಿ ನೀಡಿದರು.
ತಹಶೀಲ್ದಾರ್ ಮೊದಲು ಆಸ್ಪತ್ರೆಗೆ ಬಂದಿದ್ದ ಹೊರ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ ಸಿಬ್ಬಂದಿ ನಿಯೋಜನೆ ಬಗ್ಗೆ ವಿಚಾರಿಸಿದರು. ಬಳಿಕ ಒಳರೋಗಿಗಳನ್ನೂ ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿ ಹಾಗೂ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೇವೆಗಳು ಒಟ್ಟಾರೆ ತೃಪ್ತಿಕರವಾಗಿವೆ. ಜನರ ಅಸಮಾಧಾನ, ವಿಶೇಷವಾಗಿ ರಾತ್ರಿ ವೇಳೆಯ ಚಿಕಿತ್ಸೆ ಕುರಿತ ದೂರನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು. ರಾತ್ರಿ ವೇಳೆ ಅಪಘಾತಗಳು ಸಂಭವಿಸಿದಾಗ ಅನುಭವಹೊಂದಿದ ವೈದ್ಯರ ಲಭ್ಯತೆ ಕುರಿತ ಪ್ರಶ್ನೆಗೆ, “ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ,” ಎಂದರು.
ಈ ಭೇಟಿಯಲ್ಲಿ ವೈದ್ಯಾಧಿಕಾರಿ ಆಂಜನೇಯ್ ಕುಮಾರ್, ಉಪ ತಹಶೀಲ್ದಾರ್ ಹಾಗೂ ರಾಜಸ್ವ ನಿರೀಕ್ಷಕ ಅಫ಼್ರೋಜ್ ಅಹಮದ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…