Headlines

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಸ್ಥಿತಿಯನ್ನು ಪರಿಶೀಲಿಸಲು ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ಇಂದು ದಿಡೀರ್ ಭೇಟಿ ನೀಡಿದರು.

ತಹಶೀಲ್ದಾರ್ ಮೊದಲು ಆಸ್ಪತ್ರೆಗೆ ಬಂದಿದ್ದ ಹೊರ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ ಸಿಬ್ಬಂದಿ ನಿಯೋಜನೆ ಬಗ್ಗೆ ವಿಚಾರಿಸಿದರು. ಬಳಿಕ ಒಳರೋಗಿಗಳನ್ನೂ ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿ ಹಾಗೂ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೇವೆಗಳು ಒಟ್ಟಾರೆ ತೃಪ್ತಿಕರವಾಗಿವೆ. ಜನರ ಅಸಮಾಧಾನ, ವಿಶೇಷವಾಗಿ ರಾತ್ರಿ ವೇಳೆಯ ಚಿಕಿತ್ಸೆ ಕುರಿತ ದೂರನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು. ರಾತ್ರಿ ವೇಳೆ ಅಪಘಾತಗಳು ಸಂಭವಿಸಿದಾಗ ಅನುಭವಹೊಂದಿದ ವೈದ್ಯರ ಲಭ್ಯತೆ ಕುರಿತ ಪ್ರಶ್ನೆಗೆ, “ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ,” ಎಂದರು.

ಈ ಭೇಟಿಯಲ್ಲಿ ವೈದ್ಯಾಧಿಕಾರಿ ಆಂಜನೇಯ್ ಕುಮಾರ್, ಉಪ ತಹಶೀಲ್ದಾರ್ ಹಾಗೂ ರಾಜಸ್ವ ನಿರೀಕ್ಷಕ ಅಫ಼್ರೋಜ್ ಅಹಮದ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Exit mobile version