ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ಪೇಟೆಯ ವಿದ್ಯಾರ್ಥಿಗಳು ಆಯ್ಕೆ
ರಿಪ್ಪನ್ಪೇಟೆ : ಆಂಧ್ರಪ್ರದೇಶದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಡಿಸೆಂಬರ್ 10 ರಿಂದ 14 ರವರೆಗೆ ಆಂಧ್ರಪ್ರದೇಶದ ಖಾಕಿನಾಡ ನಗರದಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಹಮ್ಮದ್ ಝಿಯಾದ್ ಎಂ , ಆದರ್ಶ್ ಎಸ್ ಹಾಗೂ ಬಿ ಎ ವಿದ್ಯಾರ್ಥಿ ಪ್ರತಾಪ್ ಕೆ ಆಯ್ಕೆಯಾಗಿದ್ದಾರೆ.
ಸಾಗರ ರಸ್ತೆಯ ನಿವಾಸಿಗಳಾದ ಮುಸ್ತಫಾ ಮತ್ತು ಸಮೀನಾ ದಂಪತಿಗಳ ಪುತ್ರನಾದ ಮಹಮ್ಮದ್ ಝಿಯಾದ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ಬಿಕಾಂ ವ್ಯಾಸಂಗ ಮಾಡುತಿದ್ದಾರೆ.
ನೆವಟೂರು ಗ್ರಾಮದ ನಿವಾಸಿಗಳಾದ ಶ್ರೀಪಾದ್ ಮತ್ತು ಅಂಬಿಕಾ ದಂಪತಿಗಳ ಪುತ್ರನಾದ ಆದೃ ಎಸ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ಬಿಕಾಂ ವ್ಯಾಸಂಗ ಮಾಡುತಿದ್ದಾರೆ.
ಆನಂದಪುರ ಗ್ರಾಮದ ನಿವಾಸಿ ತಿಮ್ಮಪ್ಪ ಮತ್ತು ಮಂಜುಳಾ ದಂಪತಿಗಳ ಪುತ್ರನಾದ ಪ್ರತಾಪ್ ಟಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ವ್ಯಾಸಾಂಗ ಮಾಡುತಿದ್ದಾರೆ.
ಅದ್ವಿತೀಯ ಪ್ರದರ್ಶನ ನೀಡುವ ಮೂಲಕ ವಿಶ್ವವಿದ್ಯಾಲಯ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡ ವಿದ್ಯಾರ್ಥಿಗಳಿಗೆ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮತ್ತು ಅಭಿವೃದ್ಧಿ ಸಮಿತಿ ಸದಸ್ಯರು ,ಕಾಲೇಜಿನ ಪ್ರಾಂಶುಪಾಲರಾದ ವಿರೂಪಾಕ್ಷಪ್ಪ ,ದೈಹಿಕ ಶಿಕ್ಷಕರಾದ ರವೀಶ್ ಎನ್ ಎಸ್ ಮತ್ತು ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…