ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ
Rural sports need to be preserved and developed – MLA Belur Gopalakrishna
ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ
Rural sports need to be preserved and developed – MLA Belur Gopalakrishna
Rural sports need to be preserved and developed – MLA Belur Gopalakrishna
Rural sports need to be preserved and developed – MLA Belur Gopalakrishna
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳಿಕಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ ಗ್ರಾಮೀಣ ಸಾಂಸ್ಕೃತಿಕ ಸೊಗಡಿನೊಂದಿಗೆ ಯಶಸ್ವಿಯಾಗಿ ನಡೆಯಿತು. ಕ್ರೀಡಾಕೂಟಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದ್ದು, ತಾವೂ ಕ್ರೀಡಾಪಟುಗಳೊಂದಿಗೆ ಹಗ್ಗ ಜಗ್ಗಾಟದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಗ್ರಾಮೀಣ ಭಾಗದ ಪಾರಂಪರಿಕ ಕ್ರೀಡೆಗಳು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿವೆ. ಇಂದಿನ ಯುಗದಲ್ಲಿ ಆಧುನಿಕ ಕ್ರೀಡೆಗಳ ಪ್ರಭಾವ ಹೆಚ್ಚುತ್ತಿರುವುದರಿಂದ ಹಗ್ಗ ಜಗ್ಗಾಟದಂತಹ ಸಾಂಪ್ರದಾಯಿಕ ಕ್ರೀಡೆಗಳು ನಿಧಾನವಾಗಿ ಮರೆಯಾಗುತ್ತಿರುವುದು ವಿಷಾದಕರ ಸಂಗತಿ. ಇವುಗಳನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಹಗ್ಗ ಜಗ್ಗಾಟದಂತಹ ಕ್ರೀಡೆಗಳು ಕೇವಲ ಮನರಂಜನೆಗಾಗಿ ಮಾತ್ರವಲ್ಲ, ದೈಹಿಕ ಆರೋಗ್ಯ, ಮಾನಸಿಕ ಸ್ಥೈರ್ಯ ಹಾಗೂ ತಂಡಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಗ್ರಾಮೀಣ ಯುವಕರಿಗೆ ಇಂತಹ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿದ್ದು, ಅವರಲ್ಲಿರುವ ಪ್ರತಿಭೆ ಹೊರಹೊಮ್ಮಲು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಮುಂದಿನ ದಿನಗಳಲ್ಲಿ ಕೋಡೂರು ಹಾಗೂ ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದಾಗಿ ಶಪಥಪೂರ್ವಕವಾಗಿ ಘೋಷಿಸಿದರು.
ಕ್ರೀಡಾ ಮೈದಾನಗಳ ಅಭಿವೃದ್ಧಿ, ಯುವಕರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಹಾಗೂ ಗ್ರಾಮೀಣ ಮಟ್ಟದಲ್ಲಿ ನಿರಂತರವಾಗಿ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಭರವಸೆ ನೀಡಿದರು.
ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ ತಂಡಗಳು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಭಾಗವಹಿಸಿ ಕ್ರೀಡಾಸ್ಫೂರ್ತಿಯನ್ನು ಮೆರೆದವು. ಜಯಶಾಲಿ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಢರಾದ ಬಿ ಜಿ ಚಂದ್ರಮೌಳಿ , ಮುಖಂಡರಾದ ಬೋರಣ್ಣ ಬಿಳಿಕಿ , ವೆಂಕಟಾಚಲ , ಮಹೇಂದ್ರ ಬುಕ್ಕಿವರೆ , ಮಧು ಬಿಳಿಕಿ ಮತ್ತು ನಿರ್ಣಾಯಕರಾದ ಸುರೇಶ್ ಸಿಂಗ್ , ರಾಜು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು, ಮುಖಂಡರು, ಯುವಕರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.