ಶ್ರೀಗಂಧ ಮರ ಕಡಿತಲೆ : ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ , ಓರ್ವನ ಬಂಧನ
ಸಾಗರ: ಸಾಗರ ಪೊಲೀಸ್ ಅರಣ್ಯ ಸಂಚಾರ ದಳ ಮತ್ತು ವಲಯ ಅರಣ್ಯಾಧಿಕಾರಿಗಳು ಜಂಟಿಯಾಗಿ ನಡೆಸಿದ ದಾಳಿಯಲ್ಲಿ, ಬರದವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಶ್ರೀಗಂಧ ಮರವನ್ನು ಕಡಿದಿದ್ದ ಆರೋಪದ ಮೇಲೆ ಒಬ್ಬರನ್ನು ಬಂಧಿಸಿದ್ದಾರೆ.
ಮುಬಾರಕ್ ಬಿನ್ ಮಹಮ್ಮದ್ ಪಾಷಾ (ಎಸ್ಎನ್ ನಗರ, ಸಾಗರ) ಅವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಅವರ ಬಳಿಯಿಂದ 35.107 ಕೆ.ಜಿ. ಶ್ರೀಗಂಧದ ತುಂಡುಗಳು, ಒಂದು ಕೈ ಗರಗಸ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕ ಅರಣ್ಯ ಕಾಯಿದೆ 1963ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಪಿಎಸ್ಐ ವಿನಾಯಕ ಕೆ., ಆರ್ಎಫ್ಒ ಅಣ್ಣಪ್ಪ, ಸಿಬ್ಬಂದಿ ನರೇಂದ್ರ ಕುಮಾರ್ (ಡಿ.ಆರ್ಎಫ್ಒ), ವಿಶ್ವನಾಥ್ ಹೆಚ್.ಸಿ., ಚಂದ್ರಕಾಂತ್ ಹೆಚ್.ಸಿ. ಸೇರಿದಂತೆ ತಂಡದವರು ಪಾಲ್ಗೊಂಡರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…