ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ

ರಿಪ್ಪನ್ ಪೇಟೆ : ಜಿಲ್ಲಾದ್ಯಂತ ನಂಬಿಕೆ ಮತ್ತು ವಿಶ್ವಾಸಕ್ಕೆ ಹೆಸರಾದ ಸಪ್ತಸಿರಿ ಚಿಟ್ ಫಂಡ್ಸ್ ಇದೀಗ ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ.

ಶಿವಮೊಗ್ಗ ರಸ್ತೆಯಲ್ಲಿರುವ ಜಯದೇವ ರೈಸ್ ಮಿಲ್ ಕಟ್ಟಡದಲ್ಲಿ ಗ್ರಾಹಕರಿಗಾಗಿ ನೂತನ ಸೇವಾ ಕೇಂದ್ರ ಆರಂಭವಾಗುತ್ತಿದ್ದು, ಡಿಸೆಂಬರ್ 15ರಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ವರ್ಷಗಳಿಂದ ಚಿಟ್ ಫಂಡ್ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರ, ಸಮಯಪಾಲನೆ ಮತ್ತು ಗ್ರಾಹಕ ಸ್ನೇಹಿ ಸೇವೆಗಳ ಮೂಲಕ ಸಪ್ತಸಿರಿ ಚಿಟ್ ಫಂಡ್ಸ್ ಜನಮನ ಗೆದ್ದಿದೆ. ಸಣ್ಣ ಉಳಿತಾಯದಿಂದ ದೊಡ್ಡ ಭವಿಷ್ಯ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ಮಧ್ಯಮ ಹಾಗೂ ಸಾಮಾನ್ಯ ವರ್ಗದ ಜನರಿಗೆ ಅನುಕೂಲವಾಗುವ ವಿವಿಧ ಚಿಟ್ ಯೋಜನೆಗಳನ್ನು ಸಂಸ್ಥೆ ರೂಪಿಸಿದೆ. ಉದ್ಯೋಗಿಗಳು, ವ್ಯಾಪಾರಸ್ಥರು, ಗೃಹಿಣಿಯರು ಸೇರಿದಂತೆ ಎಲ್ಲ ವರ್ಗದ ಜನರು ಸುಲಭವಾಗಿ ಸೇರಿಕೊಳ್ಳಬಹುದಾದ ಯೋಜನೆಗಳು ಇಲ್ಲಿ ಲಭ್ಯವಿವೆ.

ನೂತನ ಸೇವಾ ಕೇಂದ್ರದ ಮೂಲಕ ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಹಕರಿಗೆ ಇನ್ನಷ್ಟು ಹತ್ತಿರದ, ವೇಗವಾದ ಮತ್ತು ನೇರ ಸೇವೆ ಒದಗಿಸುವ ಗುರಿಯನ್ನು ಸಂಸ್ಥೆ ಹೊಂದಿದೆ. “ಭವಿಷ್ಯಕ್ಕಾಗಿ ಹೊಸ ಆಲೋಚನೆ – ಇಂದಿನಿಂದಲೇ ಹಣದ ಉಳಿತಾಯ” ಎಂಬ ಸಂದೇಶದೊಂದಿಗೆ, ಆರ್ಥಿಕ ಶಿಸ್ತು ಮತ್ತು ಭದ್ರತೆಯತ್ತ ಜನರನ್ನು ಪ್ರೇರೇಪಿಸುವ ಕಾರ್ಯಕ್ಕೆ ಸಪ್ತಸಿರಿ ಚಿಟ್ ಫಂಡ್ಸ್ ಮತ್ತೊಂದು ಹೆಜ್ಜೆ ಇಟ್ಟಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

21 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago