ರಿಪ್ಪನ್ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ
ರಿಪ್ಪನ್ ಪೇಟೆ : ಜಿಲ್ಲಾದ್ಯಂತ ನಂಬಿಕೆ ಮತ್ತು ವಿಶ್ವಾಸಕ್ಕೆ ಹೆಸರಾದ ಸಪ್ತಸಿರಿ ಚಿಟ್ ಫಂಡ್ಸ್ ಇದೀಗ ರಿಪ್ಪನ್ಪೇಟೆ ಪಟ್ಟಣದಲ್ಲಿಯೂ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ.
ಶಿವಮೊಗ್ಗ ರಸ್ತೆಯಲ್ಲಿರುವ ಜಯದೇವ ರೈಸ್ ಮಿಲ್ ಕಟ್ಟಡದಲ್ಲಿ ಗ್ರಾಹಕರಿಗಾಗಿ ನೂತನ ಸೇವಾ ಕೇಂದ್ರ ಆರಂಭವಾಗುತ್ತಿದ್ದು, ಡಿಸೆಂಬರ್ 15ರಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ವರ್ಷಗಳಿಂದ ಚಿಟ್ ಫಂಡ್ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರ, ಸಮಯಪಾಲನೆ ಮತ್ತು ಗ್ರಾಹಕ ಸ್ನೇಹಿ ಸೇವೆಗಳ ಮೂಲಕ ಸಪ್ತಸಿರಿ ಚಿಟ್ ಫಂಡ್ಸ್ ಜನಮನ ಗೆದ್ದಿದೆ. ಸಣ್ಣ ಉಳಿತಾಯದಿಂದ ದೊಡ್ಡ ಭವಿಷ್ಯ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ಮಧ್ಯಮ ಹಾಗೂ ಸಾಮಾನ್ಯ ವರ್ಗದ ಜನರಿಗೆ ಅನುಕೂಲವಾಗುವ ವಿವಿಧ ಚಿಟ್ ಯೋಜನೆಗಳನ್ನು ಸಂಸ್ಥೆ ರೂಪಿಸಿದೆ. ಉದ್ಯೋಗಿಗಳು, ವ್ಯಾಪಾರಸ್ಥರು, ಗೃಹಿಣಿಯರು ಸೇರಿದಂತೆ ಎಲ್ಲ ವರ್ಗದ ಜನರು ಸುಲಭವಾಗಿ ಸೇರಿಕೊಳ್ಳಬಹುದಾದ ಯೋಜನೆಗಳು ಇಲ್ಲಿ ಲಭ್ಯವಿವೆ.
ನೂತನ ಸೇವಾ ಕೇಂದ್ರದ ಮೂಲಕ ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಹಕರಿಗೆ ಇನ್ನಷ್ಟು ಹತ್ತಿರದ, ವೇಗವಾದ ಮತ್ತು ನೇರ ಸೇವೆ ಒದಗಿಸುವ ಗುರಿಯನ್ನು ಸಂಸ್ಥೆ ಹೊಂದಿದೆ. “ಭವಿಷ್ಯಕ್ಕಾಗಿ ಹೊಸ ಆಲೋಚನೆ – ಇಂದಿನಿಂದಲೇ ಹಣದ ಉಳಿತಾಯ” ಎಂಬ ಸಂದೇಶದೊಂದಿಗೆ, ಆರ್ಥಿಕ ಶಿಸ್ತು ಮತ್ತು ಭದ್ರತೆಯತ್ತ ಜನರನ್ನು ಪ್ರೇರೇಪಿಸುವ ಕಾರ್ಯಕ್ಕೆ ಸಪ್ತಸಿರಿ ಚಿಟ್ ಫಂಡ್ಸ್ ಮತ್ತೊಂದು ಹೆಜ್ಜೆ ಇಟ್ಟಿದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…