ಮೂರು ಕೋಟಿ ಇನ್ಸೂರೆನ್ಸ್ ಹಣಕ್ಕಾಗಿ ತಂದೆಯನ್ನು ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

Sinful children killed their father by biting him with a snake for three crores of insurance money

ಮೂರು ಕೋಟಿ ವಿಮಾ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯ ಹತ್ಯೆ: ಇಬ್ಬರು ಪುತ್ರರ ಸೇರಿ ಐವರ ಬಂಧನ

Sinful children killed their father by biting him with a snake for three crores of insurance money

Sinful children killed their father by biting him with a snake for three crores of insurance money

Sinful children killed their father by biting him with a snake for three crores of insurance money


ತಮಿಳುನಾಡಿನ ತಿರುತ್ತಣಿ ಸಮೀಪದ ಪೊಥಟ್ಟೂರ್‌ಪೆಟ್ಟೈ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಾವು ಕಡಿತ ಸಾವಿನ ಪ್ರಕರಣದಲ್ಲಿ ಭೀಕರ ಸತ್ಯ ಬೆಳಕಿಗೆ ಬಂದಿದೆ. ತಿರುತ್ತಣಿ ಸರ್ಕಾರಿ ಶಾಲೆಯ ಪ್ರಯೋಗಾಲಯ ಸಹಾಯಕ ಇ.ಪಿ. ಗಣೇಶ್‌ (59) ಅವರ ಸಾವು ಆಕಸ್ಮಿಕವಲ್ಲ, ಮೂರು ಕೋಟಿ ರೂಪಾಯಿ ವಿಮಾ ಹಣಕ್ಕಾಗಿ ರೂಪಿಸಿದ ಪೂರ್ವಯೋಜಿತ ಹತ್ಯೆ ಎಂಬುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ.


ಘಟನೆ ಬಳಿಕ ಗಣೇಶ್ ಅವರ ಪುತ್ರ ಜಿ. ಮೋಹನ್ ರಾಜ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಮೊದಲಿಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು. ಆರಂಭಿಕ ತನಿಖೆಯಲ್ಲಿ ಹಾವು ಕಡಿತದಿಂದ ಮೃತಪಟ್ಟಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ, ಗಣೇಶ್ ಅವರ ನಿಧನದ ಕೆಲವೇ ತಿಂಗಳಲ್ಲಿ ಕುಟುಂಬವು ಭಾರೀ ಮೊತ್ತದ ವಿಮಾ ಕ್ಲೈಮ್ ಸಲ್ಲಿಸಿದ್ದರಿಂದ ಅನುಮಾನಗಳು ಹೆಚ್ಚಾಗಿವೆ.


ಒಟ್ಟು ಸುಮಾರು ಮೂರು ಕೋಟಿ ರೂಪಾಯಿ ವಿಮಾ ಹಣಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ಪುತ್ರರ ನಡವಳಿಕೆ ಅನುಮಾನಾಸ್ಪದವೆಂದು ಕಂಡ ವಿಮಾ ಕಂಪನಿ, ತಮಿಳುನಾಡಿನ ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕಿ ಆಸ್ರಾ ಗಾರ್ಗ್ ಅವರಿಗೆ ದೂರು ನೀಡಿತು. ಇದಾದ ಬಳಿಕ ಪ್ರಕರಣಕ್ಕೆ ತಿರುವು ಸಿಕ್ಕಿತು.ಪೊಲೀಸರು ಪುನಃ ತನಿಖೆ ಕೈಗೊಂಡು ಕುಟುಂಬದ ಮನೆಗೆ ಭೇಟಿ ನೀಡಿ ಶೋಧ ನಡೆಸಿದರು. ಈ ವೇಳೆ ಕುಟುಂಬವು ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿರುವುದು ಹಾಗೂ ಆದಾಯಕ್ಕೆ ಮೀರಿ ಭಾರೀ ಮೊತ್ತದ ವಿಮಾ ಪಾಲಿಸಿಗಳನ್ನು ಪಡೆದಿರುವುದು ಬೆಳಕಿಗೆ ಬಂತು. ಈ ಅಂಶಗಳು ತನಿಖಾಧಿಕಾರಿಗಳ ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿತು.


ತೀವ್ರ ವಿಚಾರಣೆಯಲ್ಲಿ, ಗಣೇಶ್ ಅವರ ಇಬ್ಬರು ಪುತ್ರರು ತಮ್ಮ ತಂದೆಯನ್ನು ಕೊಂದು ವಿಮಾ ಹಣ ಪಡೆಯಲು ಸಂಚು ರೂಪಿಸಿದ್ದನ್ನು ಒಪ್ಪಿಕೊಂಡಿದ್ದಾರೆ. ಮನವೂರಿನ ಜಿ. ಬಾಲಾಜಿ, ಬಿ. ಪ್ರಶಾಂತ್, ಮೋಸರು ಗ್ರಾಮದ ಎಸ್. ದಿನಕರ್ ಹಾಗೂ ಮನವೂರಿನ ಜಿ. ನವೀನ್ ಕುಮಾರ್ ಎಂಬ ನಾಲ್ವರ ಸಹಾಯದಿಂದ ಹತ್ಯೆ ನಡೆಸಿರುವುದಾಗಿ ತಿಳಿಸಿದ್ದಾರೆ.


ಆರೋಪಿಗಳ ಪ್ರಕಾರ, ಗಣೇಶ್ ಮಲಗಿದ್ದ ವೇಳೆ ಅವರ ಕುತ್ತಿಗೆ ಮೇಲೆ ಹಾವನ್ನು ಬಿಡಲಾಗಿತ್ತು. ಹಾವು ಕಚ್ಚಿದ ಪರಿಣಾಮ ಅವರು ಮೃತಪಟ್ಟರು. ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಹಾವನ್ನೇ ಕೊಂದು ಹಾಕಲಾಗಿದೆ. ಈ ಕೃತ್ಯವನ್ನು ಅಪಘಾತದಂತೆ ತೋರಿಸಲು ಪ್ರಯತ್ನಿಸಲಾಗಿತ್ತು.


ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪುತ್ರರು ಸೇರಿ ಐವರು ಆರೋಪಿಗಳನ್ನು ಬಂಧಿಸಿ, ಮುಂದಿನ ತನಿಖೆ ಮುಂದುವರೆಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಮರೆತು ಹಣದ ಲಾಲಸೆಗೆ ಸ್ವಂತ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಆಘಾತ ಮೂಡಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

17 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

18 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

22 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

24 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago