ಮೂರು ಕೋಟಿ ಇನ್ಸೂರೆನ್ಸ್ ಹಣಕ್ಕಾಗಿ ತಂದೆಯನ್ನು ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

Sinful children killed their father by biting him with a snake for three crores of insurance money

ಮೂರು ಕೋಟಿ ವಿಮಾ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯ ಹತ್ಯೆ: ಇಬ್ಬರು ಪುತ್ರರ ಸೇರಿ ಐವರ ಬಂಧನ

Sinful children killed their father by biting him with a snake for three crores of insurance money

Sinful children killed their father by biting him with a snake for three crores of insurance money

Sinful children killed their father by biting him with a snake for three crores of insurance money


ತಮಿಳುನಾಡಿನ ತಿರುತ್ತಣಿ ಸಮೀಪದ ಪೊಥಟ್ಟೂರ್‌ಪೆಟ್ಟೈ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಾವು ಕಡಿತ ಸಾವಿನ ಪ್ರಕರಣದಲ್ಲಿ ಭೀಕರ ಸತ್ಯ ಬೆಳಕಿಗೆ ಬಂದಿದೆ. ತಿರುತ್ತಣಿ ಸರ್ಕಾರಿ ಶಾಲೆಯ ಪ್ರಯೋಗಾಲಯ ಸಹಾಯಕ ಇ.ಪಿ. ಗಣೇಶ್‌ (59) ಅವರ ಸಾವು ಆಕಸ್ಮಿಕವಲ್ಲ, ಮೂರು ಕೋಟಿ ರೂಪಾಯಿ ವಿಮಾ ಹಣಕ್ಕಾಗಿ ರೂಪಿಸಿದ ಪೂರ್ವಯೋಜಿತ ಹತ್ಯೆ ಎಂಬುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ.


ಘಟನೆ ಬಳಿಕ ಗಣೇಶ್ ಅವರ ಪುತ್ರ ಜಿ. ಮೋಹನ್ ರಾಜ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಮೊದಲಿಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು. ಆರಂಭಿಕ ತನಿಖೆಯಲ್ಲಿ ಹಾವು ಕಡಿತದಿಂದ ಮೃತಪಟ್ಟಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ, ಗಣೇಶ್ ಅವರ ನಿಧನದ ಕೆಲವೇ ತಿಂಗಳಲ್ಲಿ ಕುಟುಂಬವು ಭಾರೀ ಮೊತ್ತದ ವಿಮಾ ಕ್ಲೈಮ್ ಸಲ್ಲಿಸಿದ್ದರಿಂದ ಅನುಮಾನಗಳು ಹೆಚ್ಚಾಗಿವೆ.


ಒಟ್ಟು ಸುಮಾರು ಮೂರು ಕೋಟಿ ರೂಪಾಯಿ ವಿಮಾ ಹಣಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ಪುತ್ರರ ನಡವಳಿಕೆ ಅನುಮಾನಾಸ್ಪದವೆಂದು ಕಂಡ ವಿಮಾ ಕಂಪನಿ, ತಮಿಳುನಾಡಿನ ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕಿ ಆಸ್ರಾ ಗಾರ್ಗ್ ಅವರಿಗೆ ದೂರು ನೀಡಿತು. ಇದಾದ ಬಳಿಕ ಪ್ರಕರಣಕ್ಕೆ ತಿರುವು ಸಿಕ್ಕಿತು.ಪೊಲೀಸರು ಪುನಃ ತನಿಖೆ ಕೈಗೊಂಡು ಕುಟುಂಬದ ಮನೆಗೆ ಭೇಟಿ ನೀಡಿ ಶೋಧ ನಡೆಸಿದರು. ಈ ವೇಳೆ ಕುಟುಂಬವು ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿರುವುದು ಹಾಗೂ ಆದಾಯಕ್ಕೆ ಮೀರಿ ಭಾರೀ ಮೊತ್ತದ ವಿಮಾ ಪಾಲಿಸಿಗಳನ್ನು ಪಡೆದಿರುವುದು ಬೆಳಕಿಗೆ ಬಂತು. ಈ ಅಂಶಗಳು ತನಿಖಾಧಿಕಾರಿಗಳ ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿತು.


ತೀವ್ರ ವಿಚಾರಣೆಯಲ್ಲಿ, ಗಣೇಶ್ ಅವರ ಇಬ್ಬರು ಪುತ್ರರು ತಮ್ಮ ತಂದೆಯನ್ನು ಕೊಂದು ವಿಮಾ ಹಣ ಪಡೆಯಲು ಸಂಚು ರೂಪಿಸಿದ್ದನ್ನು ಒಪ್ಪಿಕೊಂಡಿದ್ದಾರೆ. ಮನವೂರಿನ ಜಿ. ಬಾಲಾಜಿ, ಬಿ. ಪ್ರಶಾಂತ್, ಮೋಸರು ಗ್ರಾಮದ ಎಸ್. ದಿನಕರ್ ಹಾಗೂ ಮನವೂರಿನ ಜಿ. ನವೀನ್ ಕುಮಾರ್ ಎಂಬ ನಾಲ್ವರ ಸಹಾಯದಿಂದ ಹತ್ಯೆ ನಡೆಸಿರುವುದಾಗಿ ತಿಳಿಸಿದ್ದಾರೆ.


ಆರೋಪಿಗಳ ಪ್ರಕಾರ, ಗಣೇಶ್ ಮಲಗಿದ್ದ ವೇಳೆ ಅವರ ಕುತ್ತಿಗೆ ಮೇಲೆ ಹಾವನ್ನು ಬಿಡಲಾಗಿತ್ತು. ಹಾವು ಕಚ್ಚಿದ ಪರಿಣಾಮ ಅವರು ಮೃತಪಟ್ಟರು. ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಹಾವನ್ನೇ ಕೊಂದು ಹಾಕಲಾಗಿದೆ. ಈ ಕೃತ್ಯವನ್ನು ಅಪಘಾತದಂತೆ ತೋರಿಸಲು ಪ್ರಯತ್ನಿಸಲಾಗಿತ್ತು.


ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪುತ್ರರು ಸೇರಿ ಐವರು ಆರೋಪಿಗಳನ್ನು ಬಂಧಿಸಿ, ಮುಂದಿನ ತನಿಖೆ ಮುಂದುವರೆಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಮರೆತು ಹಣದ ಲಾಲಸೆಗೆ ಸ್ವಂತ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಆಘಾತ ಮೂಡಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

15 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

15 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

15 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

17 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

21 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

21 hours ago