ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದ
ಇಬ್ಬರು ಯುವಕರ ಬಂಧನ

ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರು ;

ಕುಂಸಿ ಗ್ರಾಮದ ಅಮಾನ್ ಸಿಂಗ್ ಅಲಿಯಾಸ್ ಮುನ್ನಾ (21) ಮತ್ತು ಸೋಮಶೆಟ್ಟಿಕೊಪ್ಪದ ವಿಕಾಸ್ (21) ಎಂಬ ಯುವಕರು ಆರೋಪಿಗಳು. ಕಳೆದ ಅಕ್ಟೋಬರ್ 2 ರಂದು ರಜಪೂತರ ಬೀದಿಯಲ್ಲಿ ನಡೆದಿದ್ದ ವೃದ್ಧೆ ಬಸಮ್ಮ ಅವರ ಕೊಲೆ ಪ್ರಕರಣದ ಕುರಿತು ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ವಿವರ ಬಿಡುಗಡೆ ಮಾಡಿದರು.

ಚಿನ್ನಾಭರಣವೇ ಕೊಲೆಗೆ ದಾರಿ :

ಬಸಮ್ಮ ಮನೆಯಲ್ಲಿದ್ದ ಚಿನ್ನಾಭರಣದ ಮೇಲೆ ಕಣ್ಣು ಹಾಕಿದ್ದ ಆರೋಪಿಗಳು, ಘಟನೆಗಿಂತ ಎರಡು ತಿಂಗಳ ಮೊದಲೇ ಕೊಲೆ-ದರೋಡೆಗೆ ಪ್ಲಾನ್ ರೂಪಿಸಿದ್ದರು. ಅಕ್ಟೋಬರ್ 2ರಂದು ಸಂಜೆ ಗ್ಯಾಸ್ ಸಿಲಿಂಡರ್ ಹಾಕಿಕೊಡುವ ನೆಪದಲ್ಲಿ ಮನೆಗೆ ಪ್ರವೇಶಿಸಿ, ವೃದ್ಧೆಗೆ ಪಲಾವ್ ತಿನ್ನಿಸಿದ್ದೂ, ನಂತರ ನೀರು ತರಿಸುವ ಮುನ್ನಾನೆ ಆರಿತವಾದ ಆಯುಧದಿಂದ 15-20 ಬಾರಿ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾಗಿ ತನಿಖೆಯಲ್ಲಿ ಬಹಿರಂಗವಾಗಿದೆ.

ಮೊದಲ ಶಂಕೆ ಪುತ್ರನ ಮೇಲೆ — ಬಳಿಕ ಪೊಲೀಸರಿಗೆ ಸವಾಲು

ಪ್ರಕರಣ ದಾಖಲಾಗುತ್ತಿದ್ದಂತೆ ಬಸಮ್ಮ ಅವರ ಪುತ್ರ ರಮೇಶ್ ಮೇಲೆ ಶಂಕೆ ವ್ಯಕ್ತವಾಗಿತ್ತು. ವಿಚಾರಣೆ ಬಳಿಕ ಆತನ ಪಾತ್ರವಿಲ್ಲವೆಂಬುದು ಸ್ಪಷ್ಟವಾದರೂ, ಹಂತಕರು ಯಾರು ಎಂಬುದು ಪತ್ತೆಯಾಗದೆ ಪ್ರಕರಣ ಗೊಂದಲಗೊಂಡಿತ್ತು.

ಅಪರಾಧ ಬೇಧಿಸಲು ಎಎಸ್‌ಪಿಗಳಾದ ರಮೇಶ್, ಎ.ಜಿ. ಕಾರಿಯಪ್ಪ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಸಂಜೀವ್ ಕುಮಾರ್ ಮೇಲ್ವಿಚಾರಣೆಯಲ್ಲಿ, ಇನ್‍ಸ್ಪೆಕ್ಟರ್ ಎಂ.ಎಸ್. ದೀಪಕ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಯಿತು.

ಶವ ಸಾಗಾಟಕ್ಕೂ ಪ್ಲಾನ್ — ರಂಗೋಲಿ ಕಾಟಕ್ಕೆ ಪ್ಲಾನ್‌ ಫೇಲ್

ಕೊಲೆ ಮಾಡಿದ ಮರುದಿನ ಶವವನ್ನು ಗುಪ್ತವಾಗಿ ಸಾಗಿಸಲು ಆರೋಪಿ ಅಮಾನ್-ವಿಕಾಸ್ ಪ್ಲಾನ್ ಮಾಡಿಕೊಂಡಿದ್ದರು. ಆದರೆ ಬೆಳಗ್ಗೆ ಎದುರಿನ ಮನೆಯ ಯುವತಿಯೊಬ್ಬಳು ರಂಗೋಲಿ ಹಾಕುವಾಗ ಬಾಗಿಲು ಬಡಿದು ಕೂಗಿದರೂ ಪ್ರತಿಕ್ರಿಯೆ ಬರದ ಕಾರಣ ಅನುಮಾನಗೊಂಡು ಪುತ್ರ ರಮೇಶ್‌ಗೆ ಮಾಹಿತಿ ನೀಡಿದರು.

ರಮೇಶ್ ಸ್ಥಳಕ್ಕೆ ಬಂದು ಬಾಗಿಲು ಮುರಿಯಲು ಮುಂದಾಗುತ್ತಿದ್ದಾಗ ಗ್ರಾಮಸ್ಥರು ಕೂಡಿಬಂದರು. ಆತಂಕಗೊಂಡ ಆರೋಪಿಗಳು ಅಟ್ಟದಲ್ಲಿ ಅಡಗಿ, ಬಳಿಕ ಕಿಟಕಿಯ ಮೂಲಕ ತಪ್ಪಿಸಿಕೊಂಡು ಅಮಾನ್ ಮನೆಯತ್ತ ಓಡಿದ್ದಾಗಿ ಪೊಲೀಸರು ಹೇಳಿದರು.

ಜಪ್ತಿ ಮಾಡಿದ ವಸ್ತುಗಳು ;

ಕಿವಿ ಓಲೆ

ಕಿವಿಯ ಚೈನ್

ಉಂಗುರ

ದರೋಡೆಗೆ ಬಳಸಿದ ಬೈಕ್

ಇಬ್ಬರ ಮೊಬೈಲ್‌ಗಳು

ಕೆಲವು ಪುರಾವೆಗಳು

ಈ ಸಂಧರ್ಭದಲ್ಲಿ ಎಎಸ್‌ಪಿ ರಮೇಶ್, ಎ.ಜಿ. ಕಾರಿಯಪ್ಪ, ಡಿವೈಎಸ್‌ಪಿ ಸಂಜೀವ್ ಕುಮಾರ್, ಬಾಬು ಅಂಜನಪ್ಪ, ಇನ್‍ಸ್ಪೆಕ್ಟರ್ ಎಂ.ಎಸ್. ದೀಪಕ್ ಹಾಜರಿದ್ದರು.

– POSTMAN NEWS ಕ್ರೈಂ ಬ್ಯೂರೋ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

41 minutes ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

18 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago