ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ

ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ  ಸಂಘದ ಅಧ್ಯಕ್ಷ  ಪ್ರೊ. ಡಾ!! ದಾದಾ ಪೀರ್,   ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ  ಅಗತ್ಯವಾಗಿದೆ.  ಚರ್ಮರೋಗ ವಿಭಾಗದಲ್ಲಿ ಅನಧಿಕೃತ
ಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ ಎಂದರು.

ಜಿಲ್ಲೆಯಲ್ಲಿ ನಕಲಿ ಚರ್ಮ ವೈದ್ಯರು ಅಥವಾ ಅತ್ಹತೆ ಇಲ್ಲದ ವೈದ್ಯರು ಹೆಚ್ಚುತ್ತಿದ್ದು, ಚಿಕಿತ್ಸೆ ನೀಡಿ ಚರ್ಮರೋಗಕ್ಕೆ ಕಾರಣರಾಗುತ್ತಿದ್ದಾರೆ. ಅವರಿಂದ ಗುಣವಾಗದವರು ತಮ್ಮಲ್ಲಿ ಬರುತ್ತಿದ್ದಾರೆ. ಬ್ಯುಟಿಶಿಯನ್ಸ್ ಸಹ ಫೇಸಿಯಲ್ ಚಿಕಿತ್ಸೆ ನೀಡುತ್ತಿದ್ದಾರೆ. ಇದು ಕಾನೂನುಬಾಹಿರ ಕೆಲಸ ಎಂದರು.

ತಜ್ಞರಲ್ಲದ ವ್ಯಕ್ತಿಗಳು ಚರ್ಮರೋಗ ಮತ್ತು ಸೌಂದರ್ಯ ಚಿಕಿತ್ಸೆ ನಡೆಸುತ್ತಿರುವ ಘಟನೆಗಳು ದಿನೇದಿನೇ ಹೆಚ್ಚುತ್ತಿದ್ದು, ಇದು ಸಾರ್ವಜನಿಕರ ಆರೋಗ್ಯಕ್ಕೆ ಗಂಭೀರ ಆತಂಕ ಉಂಟುಮಾಡುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಚರ್ಮರೋಗ ತಜ್ಞರು (Dermatologist) ಎಂದರೆ MBBS ನಂತರ ಚರ್ಮರೋಗದಲ್ಲಿ ಮಾನ್ಯತೆ ಪಡೆದ ಸ್ನಾತಕೋತ್ತರ ಪದವಿ (MD/DNB/DVD/DDVL) ಪೂರ್ಣಗೊಳಿಸಿದ ವೈದ್ಯರು ಇಂತಹ ಅರ್ಹತೆ ಹೊಂದಿದ ವೈದ್ಯರು ಮಾತ್ರ ಚರ್ಮ, ಕೂದಲು ಮತ್ತು ಉಗುರುಗಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ಗುರುತಿಸಿ ಚಿಕಿತ್ಸೆ ನೀಡುವುದಕ್ಕೂ, ಕಾಸೆಟಿಕ್/ಲೇಸರ್ ವಿಧಾನಗಳನ್ನು, ಕೂದಲು ಕಸಿ ಶಸ್ತ್ರ ಚಿಕಿತ್ಸೆ ಗಳನ್ನು ನಡೆಸುವುದಕ್ಕೆ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ ಎಂದರು.

ಇತ್ತೀಚಿನ ದಿನಗಳಲ್ಲಿ ಅನಧಿಕೃತ (ನಕಲಿ )ವ್ಯಕ್ತಿಗಳು – ಅಲೋಪಥಿ ಅಲ್ಲದ ಚಿಕಿತ್ಸಕರು, ತರಬೇತಿ /ಪರವಾನಗಿ ಇಲ್ಲದ, ಅನರ್ಹ ಬ್ಯೂಟಿ ಕ್ಲಿನಿಕ್ ಸಿಬ್ಬಂದಿ – ಲೇಸರ್ ಕೂದಲು ತೆಗೆದುಹಾಕುವುದು, ಕೇಮಿಕಲ್ ಪೀಲ್, ಮೈಕ್ರೋನಿಡ್ಡಿಂಗ್, PRP, ಬೋಟಾಕ್ಸ್, ಫಿಲ್ಲರ್ ಹಾಗೂ ಮಚ್ಚೆ ತೆಗೆದುಹಾಕುವಂತಹ ಚಿಕಿತ್ಸೆಗಳು ಅನಧಿಕೃತವಾಗಿ ಮಾಡುತ್ತಿದ್ದುದು ಕಂಡುಬರುತ್ತಿದೆ.ಇಂತಹ ಸುರಕ್ಷತೆರಹಿತ/ಅವೈಜ್ಞಾನಿಕ ವಿಧಾನಗಳಿಂದ ಗಾಯದ ಗುಡ್ಡೆಗಳು, ಸೋಂಕುಗಳು, ವರ್ಣಕದ ತೀವು ಬದಲಾವಣೆ, ಅಲರ್ಜಿಗಳು ಹಾಗೂ ಗಂಭೀರ/ಜೀವ ಹಾನಿ ಅಡ್ಡಪರಿಣಾಮಗಳು ಕಂಡುಬರುತ್ತಿವೆ ಎಂದರು.
ಸಾರ್ವಜನಿಕರು ಅಧಿಕೃತ ವೈದ್ಯರ ಬಳಿ‌ಮಾತ್ರ ಚಿಕಿತ್ಸೆ ಪಡೆಯಬೇಕೆಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ  ಕಾರ್ಯದರ್ಶಿ ಡಾ!! ಮಂಜುನಾಥ, ಡಾ!! ಸುಮಲತಾ, ಡಾ!! ಶಾಂತಲಾ ಮೊದಲಾದವರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

4 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

5 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

8 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

8 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

1 day ago

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…

1 day ago