ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ

well-equipped theatre near the Government Pre-University College and that it will be built under special grant in the coming days. In addition, more emphasis will be given to computer education. He announced that 10 computers will be provided to the college within the next two months. He said that high priority will be given to the education and health sectors.

ರಿಪ್ಪನ್‌ಪೇಟೆ:ವಿದ್ಯಾರ್ಥಿಗಳ ಸಾಂಸ್ಕೃತಿಕ ಹಾಗೂ ಕ್ರೀಡಾ ಪ್ರತಿಭೆ ಪ್ರದರ್ಶನಕ್ಕೆ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಉತ್ತಮ ವೇದಿಕೆಯಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025–26ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿಸುವ ಮಟ್ಟಿಗೆ ಅಭಿವೃದ್ಧಿಯಾಗಿವೆ. ಸರ್ಕಾರಿ ಶಾಲೆಗಳ ಬಗ್ಗೆ ಇರುವ ಕೀಳರಿಮೆಯನ್ನು ತೊರೆದು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಅಗತ್ಯ ಮೂಲಸೌಕರ್ಯ ಕೊರತೆಯನ್ನು ನೀಗಿಸುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜ್ ಬಳಿಯಲ್ಲಿ ಸುಸಜ್ಜಿತ ರಂಗಮಂದಿರದ ಅಗತ್ಯವಿದ್ದು, ಮುಂಬರುವ ದಿನಗಳಲ್ಲಿ ವಿಶೇಷ ಅನುದಾನದಡಿ ಅದನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು. ಜೊತೆಗೆ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಮುಂದಿನ ಎರಡು ತಿಂಗಳೊಳಗೆ ಕಾಲೇಜಿಗೆ 10 ಗಣಕಯಂತ್ರಗಳನ್ನು ಒದಗಿಸುವುದಾಗಿ ಘೋಷಿಸಿದರು. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ತಂದೆ-ತಾಯಿಯವರ ಆಶೋತ್ತರಗಳನ್ನು ಈಡೇರಿಸುವುದು ಮಕ್ಕಳ ಪ್ರಮುಖ ಜವಾಬ್ದಾರಿ. ಗುರುಹಿರಿಯರನ್ನು ಗೌರವಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಚಾರ್ಯ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡುಪಲ್ಲಿ, ಸಿಡಿಸಿ ಉಪಾಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಸಿಡಿಸಿ ಸದಸ್ಯರಾದ ಮಹಮ್ಮದ್ ರಫಿ, ಕಟ್ಟೆ ನಾಗಪ್ಪ, ಲೇಖನ ಚಂದ್ರನಾಯ್ಕ್, ಬೋರಪ್ಪ, ಲಲಿತಾರಾಜೇಶ್, ಷಣ್ಮುಖಪ್ಪ, ಗ್ರಾಮ ಪಂಚಾಯತ್ ಸದಸ್ಯರಾದ ಆರ್.ವಿ. ನಿರೂಫ್, ಆಶೀಫ್ ಭಾಷಾ, ಆಶ್ವಿನಿ ರವಿಶಂಕರ್, ಮಹಾಲಕ್ಷ್ಮಿ ಹಾಗೂ ದೇವೇಂದ್ರಪ್ಪ ಗೌಡ ನೆವಟೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ 2024–25ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಗೌರವಿಸಿ ಅಭಿನಂದಿಸಿದರು.

ಉಪನ್ಯಾಸಕ ಜನಾರ್ಧನ ನಾಯ್ಕ್ ಸ್ವಾಗತಿಸಿದರು. ಸುಜಯ ನಾಡಿಗ್ ಎ.ಹೆಚ್. ನಿರೂಪಿಸಿದರು. ರಾಜೇಶ್ ಬೋಳಾರ್ ವಂದಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

2 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

19 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

21 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

22 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

22 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

22 hours ago