ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ -ಸ್ಥಳೀಯರಲ್ಲಿ ಆತಂಕ!!

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –
ಸ್ಥಳೀಯರಲ್ಲಿ ಆತಂಕ!!

Suspected tiger attack on cattle near Kodur – locals worried!!

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –
ಸ್ಥಳೀಯರಲ್ಲಿ ಆತಂಕ!!

Suspected tiger attack on cattle near Kodur – locals worried!!

ರಿಪ್ಪನ್ ಪೇಟೆ : ಇಲ್ಲಿನ ಕೋಡೂರು ಸಮೀಪದ ಕೀಳಂಬಿ ಗ್ರಾಮದಲ್ಲಿ ಜಾನುವಾರುವೊಂದರ ಮೇಲೆ ಕಾಡುಪ್ರಾಣಿಯೊಂದು ದಾಳಿ ನಡೆಸಿ ಕೊಂದಿರುವ ಘಟನೆ ವರದಿಯಾಗಿದ್ದು, ಇದು ಹುಲಿ ದಾಳಿಯೇ ಎಂಬ ಶಂಕೆ ಸ್ಥಳೀಯರಲ್ಲಿ ವ್ಯಕ್ತವಾಗಿದೆ. ಘಟನೆ ನಡೆದ ನಂತರ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಕೀಳಂಬಿ ಗ್ರಾಮದ ಸರ್ಕಾರಿ ಶಾಲೆಯ ಹತ್ತಿರ ಇರುವ ಕೆರೆಯ ಸಮೀಪ, ರಘುರಾಮ್ ಎಂಬುವವರಿಗೆ ಸೇರಿದ ಗಬ್ಬದ ಜಾನುವಾರು ಮೇಲೆ ಕಾಡುಪ್ರಾಣಿಯೊಂದು ದಾಳಿ ನಡೆಸಿದೆ ಎನ್ನಲಾಗಿದೆ. ಸಂಜೆ ಜಾನುವಾರಿನ ಶವ ಪತ್ತೆಯಾಗಿದ್ದು, ದೇಹದ ಮೇಲೆ ಆಳವಾದ ಗಾಯದ ಗುರುತುಗಳು ಕಂಡುಬಂದಿವೆ. ಕುತ್ತಿಗೆ ಮತ್ತು ದೇಹದ ಭಾಗಗಳಲ್ಲಿ ಕಂಡುಬಂದ ಗಾಯಗಳನ್ನು ಗಮನಿಸಿದ ಗ್ರಾಮಸ್ಥರು, ಇದು ಹುಲಿಯ ದಾಳಿ ಇರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೋಡೂರು ಹಾಗೂ ಸುತ್ತಮುತ್ತಲ ಗ್ರಾಮ ಪ್ರದೇಶಗಳಲ್ಲಿ ಕಾಡುಪ್ರಾಣಿಗಳ ಸಂಚಾರ ಹೆಚ್ಚಾಗಿರುವ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಿದ್ದು, ಜನರ ಜೀವ ಹಾಗೂ ಜಾನುವಾರುಗಳ ಸುರಕ್ಷತೆ ಬಗ್ಗೆ ಕಳವಳ ಹೆಚ್ಚಾಗಿದೆ. ಶಾಲೆ, ಕೆರೆ ಮತ್ತು ಕೃಷಿ ಭೂಮಿಗಳ ಸಮೀಪ ಈ ರೀತಿಯ ಘಟನೆ ನಡೆದಿರುವುದರಿಂದ ಮಕ್ಕಳು ಹಾಗೂ ರೈತರು ಹೊರಗೆ ಸಂಚರಿಸುವುದಕ್ಕೂ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

ಘಟನೆಯ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಸ್ಥಳೀಯರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು, ದಾಳಿಯ ಸ್ವರೂಪವನ್ನು ಖಚಿತಪಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅಲ್ಲದೆ, ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ನಿಗಾ ವಹಿಸಿ, ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಅರಣ್ಯ ಇಲಾಖೆ ತನಿಖೆಯ ಬಳಿಕವೇ ದಾಳಿ ಹುಲಿಯಿಂದಲೇ ಆಗಿದೆಯೇ ಎಂಬುದು ಸ್ಪಷ್ಟವಾಗಲಿದೆ, ಹದಿನೈದು ದಿನಗಳ ಹಿಂದೆ ಕೊಳವಳ್ಳಿ ಗ್ರಾಮದಲ್ಲಿ ಚಿರತೆಯೊಂದು ಜಾನುವಾರು ಮೇಲೆ ಎರಗಿ ಸಾಯಿಸಿತ್ತು ಅದಲ್ಲದೇ ಈ ಭಾಗದಲ್ಲಿ ಹುಲಿ ಇರುವ ಬಗ್ಗೆ ಯಾವುದೇ ಪೂರಕ ಪುರಾವೆಗಳಿಲ್ಲದೇ ಇರುವುದರಿಂದ ಇದು ಹುಲಿಯೋ ಅಥವಾ ಚಿರತೆಯೋ ಎಂಬುವುದು ಅರಣ್ಯ ಇಲಾಖೆಯ ತನಿಖೆಯಿಂದ ತಿಳಿದುಬರಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

3 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago