ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ | ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ

ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನು ಅನುಷ್ಟಾನಗೊಳಿಸುವ ಮೂಲಕ ಪ್ರೋತ್ಸಾಹಿಸುತ್ತಿದೆ. ಅಲ್ಲದೆ ಹಳ್ಳಿಯಲ್ಲಿನ ಶಾಲೆಗಳಲ್ಲಿ ಮಕ್ಕಳು ಕಲಿತು ಸರ್ಕಾರಿ ಉದ್ಯೋಗದಲ್ಲಿದ್ದಾರೆಂಬುದಕ್ಕೆ ಈ ಶಾಲೆಯಲ್ಲಿ ವ್ಯಾಸಂಗ ಮಾಡಿದವರು ಸರ್ಕಾರಿ ಉದ್ಯೋಗಕ್ಕೆ ಸೇರಿ ನಿವೃತ್ತಿ ಹೊಂದಿರುತ್ತಾರೆ. ಸಣ್ಣ ಗುಡಿಸಲಲ್ಲಿ ಆರಂಭವಾದ ಕಿರಿಯ ಪ್ರಾಥಮಿಕ ಶಾಲೆ ಕಾಲ ಬದಲಾದಂತೆ ಕೊಠಡಿಗಳನ್ನು ನಿರ್ಮಿಸಿ ಉತ್ತಮ ಶಿಕ್ಷಕರನ್ನು ವರ್ಗಾವಣೆ ಮಾಡಿ ಅವರ ಇಚ್ಚಾಶಕ್ತಿಯ ಫಲವೆ ಇಂದು ಶಾಲೆ ಸುವರ್ಣ ಮಹೋತ್ಸವವನ್ನು ಅಚರಿಸಿಕೊಳ್ಳುತ್ತಿರುವುದು ಸಂತೋಷವೆಂದ ಅವರು, ಖಾಸಗಿ ಶಾಲೆಗಳ ಭರಾಟೆಯಲ್ಲಿಯೂ ಹಳ್ಳಿಯ ಶಾಲೆಗಳು ಎಲ್ಲಿ ಮುಚ್ಚುತ್ತವೆ ಎಂಬ ಗೊಂದಲದಲ್ಲಿದ್ದರೂ ಕೂಡಾ ಶಿಕ್ಷಕರ ಮತ್ತು ಪೋಷಕರ ಗ್ರಾಮಸ್ಥರ ಪರಿಶ್ರಮದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಸಹ ಹೆಚ್ಚು ಇದೆ ಎಂದು ಹೇಳಿ ಶಿಕ್ಷಕರ ಕಾರ್ಯವನ್ನು ಪ್ರಶಂಸಿಸಿದರು.

ಶಾಲೆಯ ಬಳಿ ಶೌಚಾಲಯ ನಿರ್ಮಿಸುವುದು ಸೇರಿದಂತೆ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಶಾಸಕರಿಗೆ ಮನವಿ ಮಾಡಲಾಗಿ ಶಾಸಕರು ತಕ್ಷಣ ಶೌಚಾಲಯ ನಿರ್ಮಿಸುವ ಭರವಸೆ ನೀಡಿ ಈಗಾಗಲೇ ಕರಿಗೆರಸು ಹುಂಚ ಸಂಪರ್ಕದ ಲಿಂಕ್ ರಸ್ತೆ ಕಾಮಗಾರಿಗೆ 7 ಕೋಟಿ ರೂ. ಅನುದಾನ ನೀಡಲಾಗಿದೆ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಹೆಚ್.ಕೆ.ದೇವರಾಜ್ ಆಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಪವಿತ್ರ ಸಂದೀಪ, ಕೋಡೂರು ಗ್ರಾಮ ಪಂಚಾಯಿತ್ ಅಧ್ಯಕ್ಷ ಜಯಪ್ರಕಾಶ ಶೆಟ್ಟರು, ಉಪಾಧ್ಯಕ್ಷ ಸುಧಾಕರ್, ಗ್ರಾಮ ಪಂಚಾಯಿತ್ ಸದಸ್ಯರಾದ ಶೇಖರಪ್ಪ, ಚಂದ್ರಕಲಾ, ಅನ್ನಪೂರ್ಣ ಮಹೇಶ, ಉಮೇಶ ಕಲಗೋಡು, ಸುನಂದ ನಾಗರಾಜ್, ಶ್ಯಾಮಲ ಶೇಖರಪ್ಪ, ಯೋಗೇಂದ್ರ, ರೇಖಾ ನಾಗರಾಜ್, ಮಂಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ, ಶಿಕ್ಷಣ ಸಂಯೋಜಕ ಕರಿಬಸಪ್ಪ, ಪಂಚಾಯಿತ್ ಪಿಡಿಒ ನಾಗರಾಜ್ ಎಸ್, ಸಿ.ಆರ್.ಪಿ. ಸಂತೋಷ, ಮುಖ್ಯಶಿಕ್ಷಕ ಲಿಂಗಪ್ಪ ಹೆಚ್.ಬಿ, ಸಹಶಿಕ್ಷಕ ಹನುಮಂತಪ್ಪ, ಸೇರಿದಂತೆ ಇನ್ನಿತರರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಗುರುವಂದನೆ, ಪ್ರತಿಭಾ ಪುರಸ್ಕಾರ, ಸುವರ್ಣ ಮಹೋತ್ಸವದ ಕಾರ್ಯಕ್ರಮಕ್ಕೆ ಕೊಡುಗೆ ನೀಡಿದರನ್ನು ಮತ್ತು ಶಾಲೆಯ ಅಭಿವೃದ್ಧಿಗೆ ಶ್ರಮಿಸಿದವರನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತರನ್ನು ಸನ್ಮಾನಿಸಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕ ಲಿಂಗಪ್ಪ ಸ್ವಾಗತಿಸಿದರು. ಶಿಕ್ಷಕಿ ಅಂಬಿಕಾ ನಿರೂಪಿಸಿದರು. ಶಿಕ್ಷಕ ಸತ್ಯನಾರಾಯಣ ಎನ್.ಎಸ್. ವಂದಿಸಿದರು‌.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 hours ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

2 hours ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

4 hours ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

4 hours ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

4 hours ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

12 hours ago