ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ
ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ವಿಷಯ ತಿಳಿಯುತಿದ್ದಂತೆ ಹೊಸನಗರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಸೂಕ್ತ ಪರಿಹಾರಕ್ಕೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿತ್ತು ಈ ಹಿನ್ನೆಲೆಯಲ್ಲಿ ದಾಳಿಗೊಳಗಾದ ಸ್ಥಳ ಪರಿಶೀಲನೆ ನಡೆಸಿ ಸಂತ್ರಸ್ಥ ರೈತರಿಗೆ ಸಾಂತ್ವಾನ ಹೇಳಿ ಸೂಕ್ತ ಪರಿಹಾರದ ಭರವಸೆ ನೀಡಿ ಸ್ಥಳದಿಂದಲೇ ಅರಣ್ಯಾಧಿಕಾರಿಗೆ ಕರೆ ಮಾಡಿ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಉಪ ತಹಶೀಲ್ದಾರ್ ಗೌತಮ್ , ರಾಜಸ್ವ ನಿರೀಕ್ಷಕ ಅಫ಼್ರೋಜ್ ಅಹಮದ್ ,ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು , ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸಂತ್ರಸ್ಥ ರೈತರಾದ ಟೀಕಪ್ಪ ಗೌಡ , ಮುರುಳಿ ಕೆರೆಹಳ್ಳಿ ಹಾಗೂ ಇನ್ನಿತರರು ಇದ್ದರು.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…