ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು
ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ.
ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ.
ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ ಲದ್ದಿ ಹಾಕಿಕೊಂಡು ಆನೆ ತೋಟದ ಪ್ರದೇಶಕ್ಕೆ ಪ್ರವೇಶಿಸಿ, ಟೀಕಪ್ಪ ಗೌಡರ ತೋಟ ಹಾನಿಗೊಳಿಸಿ ಅಕ್ಕಪಕ್ಕದ ಗದ್ದೆ ನಾಶ ಮಾಡಿ ನಂತರ ಸಿದ್ದಪ್ಪನ ಗುಡಿ ಮಾರ್ಗವಾಗಿ ದೂನ ಗ್ರಾಮಕ್ಕೆ ಸಾಗಿದ್ದು, ಅಲ್ಲಿಂದ ಶಿವಾಜಿರಾಯರ ತೋಟವನ್ನು ತುಳಿದು ಬೈರಾಪುರ ಪ್ಲಾಂಟೇಶನ್ ಕಡೆ ಮುಂದುವರೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ, ಕಾಡಾನೆಯ ನಿಖರ ಸ್ಥಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…