Headlines

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು ಶಿವಮೊಗ್ಗ, ಸೆ.29: ನಗರದ ಜಯನಗರ ಬಡಾವಣೆಯಲ್ಲಿ 20 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಜಯನಗರ ಐದನೇ ತಿರುವಿನ ನಿವಾಸಿ ನೈಜಿಲ್ (20) ಎಂಬ ಯುವಕನೇ ಮೃತ. ಡಿಪ್ಲೊಮಾ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಮುಂದಿನ ಕೋರ್ಸ್ ಕಲಿಯುತ್ತಿದ್ದ ಆತ, ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದನು. ಬೆಳಿಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತ ನೈಜಿಲ್…

Read More

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ ಆನಂದಪುರ: “ಕಾವ್ಯಗಳ ಮೂಲಕವೇ ಮಾನವ ಸಂಬಂಧಗಳನ್ನು ಹೆಚ್ಚಿಸಬಹುದು. ಮಾತುಗಳಲ್ಲಿ ಹೇಳಲಾಗದ ವಿಚಾರಗಳನ್ನು ಕಾವ್ಯದ ಮೂಲಕ ವ್ಯಕ್ತಪಡಿಸಲು ಸಾಧ್ಯ,” ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್. ಅಭಿಪ್ರಾಯಪಟ್ಟರು. ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ ಮತ್ತು ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ…

Read More

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ ರಿಪ್ಪನ್‌ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ,…

Read More

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ ಭದ್ರಾವತಿ: ಶಾರೂಖ್‌ಖಾನ್ ಎಂಬ ಯುವಕನನ್ನು ಕೊಲೆಮಾಡಿದ್ದ ರಮೇಶ ಯಾನೆ ಹಂದಿ ರಮೇಶ, ವೆಂಕಟರಾಮ, ಚಂದ್ರ ಯಾನೆ ಚಾಣ, ಕಾರ್ತಿಕ, ಮಧುಸೂದನ ಯಾನೆ ಗುಂಡ, ರಮೇಶ ಯಾನೆ ಕೆಳವಿ ರಮೇಶ, ನಾಗರಾಜ, ಸಿದ್ಧಪ್ಪ ಎಂಬ 08 ಜನ ಆರೋಪಿಗಳಿಗೆ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಹೊಸಮನೆ ನಿವಾಸಿಯಾದ ಶಾರೂಖ್ ಖಾನ್ ಎಂಬುವನಿಂದ ೧ನೇ…

Read More

ಟೋಲ್‌ಗೇಟ್ ವಿವಾದ : ಅ.9 ಕ್ಕೆ ಶಿಕಾರಿಪುರ ಬಂದ್ ಗೆ ಕರೆ

ಟೋಲ್‌ಗೇಟ್ ವಿವಾದ : ಅ.9 ರಂದು ರಂದು ಶಿಕಾರಿಪುರ ಬಂದ್ ಗೆ ಕರೆ ಶಿಕಾರಿಪುರ, ಸೆಪ್ಟೆಂಬರ್ ೨೮ : ಕುಟ್ರಳ್ಳಿ ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ ೯ರಂದು ಶಿಕಾರಿಪುರ ಪಟ್ಟಣ ಬಂದ್‌ ನಡೆಸಲು ಟೋಲ್‌ಗೇಟ್ ಹೋರಾಟ ಸಮಿತಿ ಕರೆ ನೀಡಿದೆ ಎಂದು ಸಮಿತಿ ಮುಖಂಡ, ನ್ಯಾಯವಾದಿ ಶಿವರಾಜ್ ತಿಳಿಸಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂದು ವರ್ಷದಿಂದ ಟೋಲ್‌ಗೇಟ್ ತೆರವಿಗೆ ಹೋರಾಟ ನಡೆಸುತ್ತಿದ್ದೇವೆ. ಸಚಿವರು, ಸಂಸದರು, ಶಾಸಕರು ಎಲ್ಲರೂ ಬೆಂಬಲ ವ್ಯಕ್ತಪಡಿಸಿದರೂ, ಕಾಣದ ಶಕ್ತಿಯ ಕಾರಣದಿಂದ…

Read More

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ. ವಿಳಂಬ ಮತ್ತು ಸಾಕ್ಷ್ಯಾಧಾರಗಳಲ್ಲಿನ ಅಂತರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ ಎಂದು ಅವರು ಗಮನಸೆಳೆದರು. ಆದರೆ, ಆಪಾದಿತ ಘಟನೆಯ ಮೂರು ವರ್ಷಗಳ…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್‌ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ‌ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಇಂದು ಮುಂಜಾನೆ 5.40 ರ ಸಮಯದಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ದಿನಪತ್ರಿಕೆಯನ್ನು ಸಾಗಿಸುತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ….

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು….

Read More
Exit mobile version