Headlines

RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು

RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಜ ಸಾವು ಎಂದು ದೂರು ದಾಖಲಾಗಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದು , ಅಡಿಕೆ ತೋಟದಲ್ಲಿ ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದ ಘಟನೆ ನಡೆದಿತ್ತು ಆದರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಆಕಸ್ಮಿಕ…

Read More

ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ

ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅವರಣದಲ್ಲಿ ಅಮೃತ ಸ್ನೇಹ ಸಮ್ಮಿಲನ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನ. 23 ರ ಭಾನುವಾರ ಬೆಳಗ್ಗೆ 9.30 ಕ್ಕೆ ಅಮೃತ ಸ್ನೇಹ ಸಮ್ಮಿಲನ ‘ಶಾಲಾ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಮೃತ ಗ್ರಾಮ ಪಂಚಾಯಿತ್ ಅಧ್ಯಕ್ಷ ಸಚಿನ್‌ಗೌಡ ತಿಳಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜ್ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ…

Read More

ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಕಾಣೆಯಾಗಿರುವ ಘಟನೆ ನಡೆದಿದೆ. ಪಟ್ಟಣದ ಮದೀನ ಕಾಲೋನಿ ನಿವಾಸಿ ಮೀನು ವ್ಯಾಪಾರದಲ್ಲಿ ತೊಡಗಿದ್ದ ಬರ್ಕತ್ ಅಲಿ ಬಿನ್ ಹಾದಿ ಬಾಷಾ ಅವರು ನವೆಂಬರ್ 13, 2025 ರಂದು ಮನೆಯಿಂದ ಹೋದವರು ಮನೆಗೆ ವಾಪಾಸಾಗಿಲ್ಲ ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾನ್ಯವಾಗಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬರ್ಕತ್ ಅಲಿ ಅವರು ಆ ದಿನದಿಂದ ಯಾವುದೇ ರೀತಿಯ ಸಂಪರ್ಕಕ್ಕೂ ಸಿಗದ ಹಿನ್ನೆಲೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ…

Read More

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ ರಿಪ್ಪನ್ ಪೇಟೆ: ಸಮಾಜಮುಖಿ ಕಾರ್ಯಗಳ ಮಾಡುವುದರ ಮೂಲಕ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ, ಜೀವನದ ಒತ್ತಡವನ್ನು ತೊಡೆದು ಹಾಕಲು ಏಕೈಕ ಮಾರ್ಗ ಸಮಾಜ ಸೇವೆ ಎಂದು ರೋಟರಿ ಜಿಲ್ಲಾ 31 82ರ ಜಿಲ್ಲಾ ಗವರ್ನರ್ ಕೆ ಪಾಲಕ್ಷ ಹೇಳಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ…

Read More

ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ

ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ – ಸಮಾರೋಪ ಸಮಾರಂಭ ಸಹಕಾರ ಸಂಘಗಳು ಗ್ರಾಮೀಣ ಜನರಿಗೆ ಉಪಯುಕ್ತವಾಗಿದೆ: ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಪಟ್ಟಣದ ವಿಶ್ವಮಾನವ ಒಕ್ಕಲಿಗರ ಸಭಾಭವನದಲ್ಲಿ ನವೆಂಬರ್  20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ವಿಜೃಂಭಣೆಯಿಂದ  ಆಚರಿಸಲಾಯಿತು. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಸಭಾಭವನದಲ್ಲಿ  ಗುರುವಾರ ನಡೆದ  ಕಾರ್ಯಕ್ರಮವನ್ನು  ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ  ಡಾ. ಆರ್. ಎಂ. ಮಂಜುನಾಥ್…

Read More

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…

Read More

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ : ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಮೂಗೂಡ್ತಿ ಕ್ಲಸ್ಟರ್ ಮಟ್ಟದ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ…

Read More

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ ಬೆಂಗಳೂರು, ನವೆಂಬರ್ 16: ರಾಜ್ಯ ಕಾಂಗ್ರೆಸ್ ಪಾಳೆಯಲ್ಲಿ ಬಹುಕಾಲದಿಂದ ಕಾದಿದ್ದ ಭಾರೀ ಬದಲಾವಣೆಯ ಚರ್ಚೆ ಈಗ ವೇಗ ಪಡೆದುಕೊಂಡಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಿದ್ದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗಳನ್ನು ಭೇಟಿಯಾದುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸಾಗರ…

Read More

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…

Read More

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್ ಪೇಟೆ : ಇಲ್ಲಿನ ದೂನ ಗ್ರಾಮದ ಮಲೆನಾಡು ಕನ್ನಡಿಗರ ಸೇನೆ ಮತ್ತು ಗೆಳೆಯರ ಬಳಗದ ವತಿಯಿಂದ ದೂನದಲ್ಲಿ ಸೇನೆಯ 3ನೇ ವರ್ಷದ ಸಂಭ್ರಮ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕನ್ನಡಿಗರ ಸೇನೆ ದೂನ ಘಟಕದ ಅಧ್ಯಕ್ಷ ಚಿರಂತ್ ಭಂಡಾರಿ ತಿಳಿಸಿದ್ದಾರೆ. ಬೆಳಗ್ಗೆ 9.00 ಗಂಟೆಗೆ ದೂನ ಸರ್ಕಲ್‌ನಲ್ಲಿ ಧ್ವಜಾರೋಹಣ ಜರುಗಲಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜು…

Read More