Headlines

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇದರಲ್ಲಿ ಕಲಾ ವಿಭಾಗ 94.12%,…

Read More

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ರಾಜ್ಯಕ್ಕೆ ಪ್ರಥಮ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣಾ ಸಂಸ್ಥೆಯ  ವಿದ್ಯಾರ್ಥಿನಿ ದೀಕ್ಷಾ ಆರ್​ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ  ಪ್ರಥಮ ಸ್ಥಾನ ಪಡೆದಿದ್ದಾರೆ. ದೀಕ್ಷಾ ತೀರ್ಥಹಳ್ಳಿಯ ಬೆಟ್ಟಮಕ್ಕಿಯ ನಿವಾಸಿ ರಾಘವೇಂದ್ರ ಕಲ್ಕೂರ್​ ಹಾಗೂ ಉಷಾ ದಂಪತಿಯ ಪುತ್ರಿಯಾಗಿದ್ದಾರೆ. ಇವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಬಾಗದಲ್ಲಿ 600 ಕ್ಕೆ 599 ಅಂಕ ಗಳಿಸಿ ತೀರ್ಥಹಳ್ಳಿ ತಾಲೂಕಿಗೆ ಪ್ರಥಮ ಹೆಮ್ಮೆಯನ್ನು ತಂದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಬಾರಿ…

Read More

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ ಬೆಂಗಳೂರು: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು. ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ…

Read More

ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ 

ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ  ಶಿವಮೊಗ್ಗ: ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು  ಬೈಕ್ ಒಯ್ದ,  ಅದರೊಂದಿಗೆ ನಾಪತ್ತೆಯಾದ ಘಟನೆ ನಗರದಲ್ಲಿ ಸಂಭವಿಸಿದೆ. ಬೈಕ್‌ ಮಾಲೀಕ ಈ ಬಗ್ಗೆ ದೂರು ನೀಡಿರು ಘಟನೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರದ ಪ್ರಮೋದ್‌ ಭಟ್‌  ತಮ್ಮ ಪಲ್ಸರ್‌ ಬೈಕ್‌ ಮಾರಾಟ ಮಾಡಲು ನಿರ್ಧರಿಸಿ ಫೇಸ್‌ಬುಕ್‌ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್‌  ಇದಕ್ಕೆ ರಿಪ್ಲೆ ಮಾಡಿ, ಬೈಕ್‌ನ ವಿವರ ಪಡೆದುಕೊಂಡಿದ್ದ….

Read More

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ ವಿವಿಧೆಡೆ ಇ ಡಿ (ED) ದಾಳಿ

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ  ಇ ಡಿ (ED) ದಾಳಿ ಶಿವಮೊಗ್ಗ:  2014ರಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಕಲಿ ಬಂಗಾರ ಹಗರಣಕ್ಕೆ ಸಂಬಂಧಿಸಿ ಜಾರಿ‌ ನಿರ್ದೇಶನಾಲಯದ ( ಇ. ಡಿ. )ಅಧಿಕಾರಿಗಳು  ಮಂಗಳವಾರ ಶಿವಮೊಗ್ಗ ಮತ್ತು ಭದ್ರಾವತಿಯ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದರು. ಅಂದು ಹಗರಣದ ಕೇಂದ್ರಬಿಂದುವಾಗಿದ್ದ ಡಿಸಿಸಿ ಬ್ಯಾಂಕಿನ  ಶಿವಪ್ಪ‌ನಾಯಕ ವೃತ್ತದ ಬಳಿ ಇದ್ದ ಶಾಖೆಯ  ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ  ಅವರ ನಿವಾಸ, ಚಾಲಕರಾಗಿದ್ದ ಕಾಮಾಕ್ಷಿ ಬೀದಿಯ ಶಿವಕುಮಾರ್ ಮನೆ, ಭದ್ರಾವತಿ…

Read More

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್ ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ…

Read More

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸನಗರ ತಾಲ್ಲೂಕು ಬಿಜೆಪಿ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ವತಿಯಿಂದ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕ್ರಮ ಖಂಡನೀಯವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಬೆಲೆ ಏರಿಕೆ ಆರಂಭಮಾಡಿದೆ. ರಾಜ್ಯ…

Read More

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ ಶಿವಮೊಗ್ಗ ಏಪ್ರಿಲ್ 05: : ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ…

Read More

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ  ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ‌ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ‌ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು‌. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು…

Read More

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್‌ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ…

Read More