
ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ
ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…