Headlines

ಉರುಳಿಗೆ ಸಿಲುಕಿ ಚಿರತೆ ಸಾವು

ಉರುಳಿಗೆ ಸಿಲುಕಿ ಚಿರತೆ ಸಾವು ಶಿವಮೊಗ್ಗ: ಅರಣ್ಯದ ಅಂಚಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ಪ್ರಾಣಿಹಿಡಿಯುವ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಶಿರಾಳಕೊಪ್ಪ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ತಾಳಗುಂದ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರುವ ಖಾಸಗಿ ಜಮೀನಿನ ಅಂಚಿನಲ್ಲಿರುವ ಕಾಡಿನ ದಾರಿಯಲ್ಲಿ ಈ ಉರುಳು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ಪ್ರಾಥಮಿಕ ಅಂದಾಜು ವ್ಯಕ್ತಪಡಿಸಿದೆ. ಕೆಲವು ದಿನಗಳಿಂದ ದುರ್ವಾಸನೆ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲನೆ ನಡೆಸಿದಾಗ, ಉರುಳಿಗೆ ಸಿಲುಕಿ ಕೊಳೆತ ಸ್ಥಿತಿಯಲ್ಲಿ ಮಲಗಿದ್ದ ಚಿರತೆಯ ದೇಹ ಕಣ್ಣಿಗೆ ಬಿದ್ದಿದೆ….

Read More

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read More

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ರಿಪ್ಪನ್ ಪೇಟೆ: ಪಟ್ಟಣದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಡಿಸೆಂಬರ್ 7 ರಿಂದ 14 ವರೆಗೆ ಗೃಹ ಸಂಪರ್ಕ ಅಭಿಯಾನದ ನಿಮಿತ್ತ ಹೊಸನಗರ ತಾಲೂಕಿನ ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಆರೆಸೆಸ್ಸ್ ವಿಚಾರಧಾರೆಗಳನ್ನು ಮತ್ತು 100 ವರ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಲಿದ್ದೆವೆ ಎಂದು ತಾಲೂಕು ಕಾರ್ಯವಾಹ ಅಶ್ವಥ್ ತಿಳಿಸಿದರು. ಭಾರತ…

Read More

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read More

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪತ್ನಿ ಪುಣ್ಯವತಿ (76) ಇಂದು ವಿಧಿವಶರಾದರು. ವಿನಯಶೀಲತೆ, ಧಾರ್ಮಿಕತೆ ಮತ್ತು ಕುಟುಂಬಮುಖಿ ಸ್ವಭಾವಕ್ಕಾಗಿ ಪರಿಚಿತರಾಗಿದ್ದ ಪುಣ್ಯವತಿ ರವರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮ ಪತಿಯ ರಾಜಕೀಯ ಜೀವನಕ್ಕೆ ನಿಶ್ಶಬ್ದ ಶಕ್ತಿಯಾಗಿ ನಿಂತಿದ್ದರು. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಕುಟುಂಬದಲ್ಲಿ ಅವರು ಎಲ್ಲರನ್ನೂ ಒಗ್ಗೂಡಿಸುವ ಅಸ್ತಿತ್ವವಾಗಿದ್ದರು. ಸರಳತೆ, ಸತ್ಯನಿಷ್ಠೆ ಮತ್ತು ಕುಟುಂಬ ಮೌಲ್ಯಗಳಿಗೆ ಮಹತ್ವ ನೀಡುತ್ತಿದ್ದ ಪುಣ್ಯವತಿ…

Read More

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಹರತಾಳು ಸಮೀಪದ ಕೋಡ್ರಿಗೆ ಹೊಳೆಯ ಸಮೀಪದ ತಿರುವೊಂದರಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾದ ಹಿನ್ನೆಲೆಯಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಹೆದ್ದಾರಿಪುರ ಸಮೀಪದ ಗಿಣಸೆ ಗ್ರಾಮದ ಮಂಜುನಾಥ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಮಂಜುನಾಥ್ ಹಾಗೂ ಆತನ ಸ್ನೇಹಿತನಾದ ಲೋಹಿತ್ (29) ಹರತಾಳು ಗ್ರಾಮದಿಂದ ಹೆದ್ದಾರಿಪುರಕ್ಕೆ ಹಿರೋ ಹೊಂಡಾ ಸ್ಪೆಂಡರ್ ಬೈಕ್ ನಲ್ಲಿ ಬರುತಿದ್ದಾಗ…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More

RIPPONPETE | ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ

ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ ರಿಪ್ಪನ್ ಪೇಟೆ : ಜಾನುವಾರು ಸಾಗಣೆ ಪ್ರಕರಣದಲ್ಲಿ ನಿರ್ಲಕ್ಷ್ಯ ಚಾಲನೆಯಿಂದ ಹಸುವೊಂದು ಮೃತಪಟ್ಟ ಘಟನೆ ಅರಸಾಳು ವ್ಯಾಪ್ತಿಯಲ್ಲಿ ಇಂದು ನಡೆದಿದೆ. ರಿಪ್ಪನ್‌ಪೇಟೆ ದಿಕ್ಕಿನಿಂದ ಅರಸಾಳು ಕಡೆಗೆ ಸಂಚರಿಸುತ್ತಿದ್ದ ಟಾಟಾ ಏಸ್ (KA 40 B 1570) ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ  ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ವಾಹನ ಚಾಲಕ ಹಾಗೂ ಸಹಚರರನ್ನು ಪೊಲೀಸರು ವಶಕ್ಕೆ ಪಡೆದರು….

Read More

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | ನಿಟ್ಟೂರು : ಬಹುದಿನಗಳಿಂದ ಸ್ಥಳೀಯರ ನಿರೀಕ್ಷೆಯಲ್ಲಿದ್ದ ಹಸಿರುಮಕ್ಕಿ ಸೇತುವೆ ಕಾಮಗಾರಿ ಇನ್ನೇನು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಗಳಿಂದ ಸೇತುವೆ ಉದ್ಘಾಟನೆ ನಡೆಯಲಿದೆ ಎಂದು ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…

Read More
Exit mobile version