ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ.

ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ.

1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ ಜಾರಿಗೊಳಿಸುವ ಮೂಲಕ ಸಾರ್ವಭೌಮ, ಪ್ರಜಾಸತ್ತಾತ್ಮಕ ಮತ್ತು ಗಣರಾಜ್ಯ ರಾಷ್ಟ್ರವಾಗಿ ಘೋಷಿತವಾಯಿತು. ಆ ದಿನದಿಂದ ಪ್ರತಿವರ್ಷ ಗಣರಾಜ್ಯೋತ್ಸವ ಆಚರಣೆ ನಡೆಯುತ್ತಿದ್ದು, 2026ರಲ್ಲಿ 77ನೇ ಗಣರಾಜ್ಯೋತ್ಸವಕ್ಕೆ ದೇಶ ಸಜ್ಜಾಗಿದೆ.

ಜನವರಿ 26ರ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ಪಥಸಂಚಲನವನ್ನು ಮುನ್ನಡೆಸಲಿದ್ದಾರೆ. ಪಥಸಂಚಲನ ಬೆಳಿಗ್ಗೆ 9.30ಕ್ಕೆ ಆರಂಭವಾಗಲಿದ್ದು, 10.30ರಿಂದ ಲೈವ್‌ ಪ್ರಸಾರವಾಗಲಿದೆ. ಸಾರ್ವಜನಿಕರಿಗೆ ಬೆಳಿಗ್ಗೆ 7 ಗಂಟೆಯಿಂದ ಪ್ರವೇಶಾವಕಾಶ ನೀಡಲಾಗಿದೆ.

ಈ ವರ್ಷದ ಪರೇಡ್‌ನಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಸೇನಾ ಶಕ್ತಿ ಹಾಗೂ ತಾಂತ್ರಿಕ ಪ್ರಗತಿಯನ್ನು ಅನಾವರಣಗೊಳಿಸಲಾಗುತ್ತದೆ. ರಾಷ್ಟ್ರಗೀತೆ ‘ವಂದೇ ಮಾತರಂ’ 150 ವರ್ಷ ಪೂರೈಸಿದ ಐತಿಹಾಸಿಕ ಕ್ಷಣಕ್ಕೂ ಈ ಗಣರಾಜ್ಯೋತ್ಸವ ಸಾಕ್ಷಿಯಾಗಲಿದೆ.

ಕಾರ್ಯಕ್ರಮದ ಅಂತ್ಯದಲ್ಲಿ ಭಾರತೀಯ ವಾಯುಪಡೆಯ 29 ವಿಮಾನಗಳ ವಾಯು ಪ್ರದರ್ಶನ ನಡೆಯಲಿದೆ. ಈ ಬಾರಿ ವಾಯುಪಡೆ ‘ಸಿಂಧೂರ್’ ರಚನೆಯನ್ನು ಪ್ರದರ್ಶಿಸಲಿದ್ದು, ‘ಆಪರೇಷನ್ ಸಿಂಧೂರ್’ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ಶಕ್ತಿಪ್ರದರ್ಶನ ನೀಡಲಿವೆ. ಈ ರಚನೆಯಲ್ಲಿ ಎರಡು ರಫೇಲ್‌, ಎರಡು Su-30, ಎರಡು MiG-29 ಹಾಗೂ ಒಂದು ಜಾಗ್ವಾರ್ ಯುದ್ಧ ವಿಮಾನಗಳು ಭಾಗವಹಿಸಲಿವೆ.

ಕರ್ತವ್ಯ ಪಥದಲ್ಲಿ ಒಟ್ಟು 30 ಸ್ತಬ್ಧಚಿತ್ರಗಳು ಸಾಗಲಿದ್ದು, ‘ಸ್ವಾತಂತ್ರ್ಯದ ಮಂತ್ರ: ವಂದೇ ಮಾತರಂ’ ಮತ್ತು ‘ಸಮೃದ್ಧಿಯ ಮಂತ್ರ: ಆತ್ಮನಿರ್ಭರ ಭಾರತ’ ಈ ಬಾರಿಯ ಮುಖ್ಯ ಥೀಮ್‌ಗಳಾಗಿವೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 17 ಸ್ತಬ್ಧಚಿತ್ರಗಳು ಮತ್ತು ಕೇಂದ್ರ ಸಚಿವಾಲಯಗಳಿಂದ 13 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿವೆ. ಭಾರತೀಯ ವಾಯುಪಡೆಯ ಮಾಜಿ ಸೈನಿಕರನ್ನು ಒಳಗೊಂಡ ವಿಶೇಷ ಸ್ತಬ್ಧಚಿತ್ರವೂ ಗಮನ ಸೆಳೆಯಲಿದೆ.

ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳು ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಹಾಗೂ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮವು ಸಾಂಪ್ರದಾಯಿಕ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ಸ್ವದೇಶಿ 105 ಎಂಎಂ ಲೈಟ್ ಫೀಲ್ಡ್ ಗನ್‌ಗಳಿಂದ 21 ಬಾರಿಯ ಗೌರವ ವಂದನೆಯೊಂದಿಗೆ ಆರಂಭವಾಗಲಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲಿಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ವೀರರಿಗೆ ಗೌರವ ಸಲ್ಲಿಸಿ, ನಂತರ ಕರ್ತವ್ಯ ಪಥದ ವಂದನಾ ವೇದಿಕೆಯಿಂದ ಪಥಸಂಚಲನ ವೀಕ್ಷಿಸಲಿದ್ದಾರೆ.

ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ಸುಮಾರು 10,000 ವಿಶೇಷ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ಯಾರಾ ಕ್ರೀಡಾ ವಿಜೇತರು, ನೈಸರ್ಗಿಕ ಕೃಷಿಕರು, ಇಸ್ರೋ ವಿಜ್ಞಾನಿಗಳು, ತಾಂತ್ರಿಕ ತಜ್ಞರು ಹಾಗೂ ಹೈಡ್ರೋಜನ್ ಉತ್ಪಾದನೆಗೆ ಕೊಡುಗೆ ನೀಡಿದ ಕಂಪನಿಗಳ ಮುಖ್ಯಸ್ಥರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಬಿಗಿ ಭದ್ರತೆಯಲ್ಲಿ ದೆಹಲಿ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕರ್ತವ್ಯ ಪಥ ಮತ್ತು ರೈಸಿನಾ ಹಿಲ್ ಸುತ್ತಮುತ್ತ ವ್ಯಾಪಕ ಪೊಲೀಸ್‌ ನಿಯೋಜನೆ ಮಾಡಲಾಗಿದ್ದು, ಮೆರವಣಿಗೆ ಮಾರ್ಗದುದ್ದಕ್ಕೂ 1,000ಕ್ಕೂ ಹೆಚ್ಚು ಹೈ-ಡೆಫಿನಿಷನ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

10 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

11 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

12 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

12 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

2 days ago