ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ

A grand start to the Durga Devi Jatra festival at the historic and famous grove

ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ

A grand start to the Durga Devi Jatra festival at the historic and famous grove

ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಐತಿಹಾಸಿಕ ಪ್ರಸಿದ್ಧಿ ಪಡೆದ ಶ್ರೀ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಿತು. ಪಲ್ಲಕ್ಕಿ ಉತ್ಸವ, ಮಹಾಭಿಷೇಕ, ಭಕ್ತರ ಸೇವೆ ಹಾಗೂ ರಾಜ್ಯಮಟ್ಟದ ಜಂಗಿ ಬಯಲು ಕುಸ್ತಿ ಪ್ರಮುಖ ಆಕರ್ಷಣೆ.

ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಹಾಗೂ ಮುನವಳ್ಳಿ ಗ್ರಾಮಗಳ ಆರಾಧ್ಯ ದೈವವಾದ ಶ್ರೀ ಜಗನ್ಮಾತೆ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವವು ಸಾಂಪ್ರದಾಯಿಕ ವೈಭವದೊಂದಿಗೆ ಆರಂಭಗೊಂಡಿದೆ.

ಜಾತ್ರೆಯ ಅಂಗವಾಗಿ ಬಂಕಾಪುರ ಪಟ್ಟಣದ ಕಣೊಜಗಲ್ಲಿಯಿಂದ ಶ್ರೀ ದುರ್ಗಾದೇವಿಯ ಪಲ್ಲಕ್ಕಿ ಉತ್ಸವವು ಸಕಲ ವಾದ್ಯ ವೈಭವದೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಡೊಳ್ಳುಕುಣಿತ, ಓಲಗ, ಜಾಜುಮೇಳ ಸೇರಿದಂತೆ ವಿವಿಧ ಸಾಂಪ್ರದಾಯಿಕ ವಾದ್ಯಗಳೊಂದಿಗೆ ನಡೆದ ಮೆರವಣಿಗೆ ಭಕ್ತರಲ್ಲಿ ಅಪಾರ ಉತ್ಸಾಹ ಮೂಡಿಸಿತು. ಬಳಿಕ ಪಲ್ಲಕ್ಕಿ ಉತ್ಸವವು ಶ್ರೀ ತೋಪಿನ ದುರ್ಗಾದೇವಿ ಗರ್ಭಗುಡಿಗೆ ಪ್ರವೇಶಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಶುಕ್ರವಾರ ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ದುರ್ಗಾದೇವಿಗೆ ಮಹಾಭಿಷೇಕ ನೆರವೇರಿಸಲಾಯಿತು. ನಂತರ ಭಕ್ತರು ಉರುಳು ಸೇವೆ, ದೀಡ್ ನಮಸ್ಕಾರ ಸೇರಿದಂತೆ ವಿವಿಧ ಸೇವೆಗಳ ಮೂಲಕ ದೇವಿಗೆ ಭಕ್ತಿ ಸಮರ್ಪಿಸಿದರು. ದೇವಿಗೆ ನೇವೇದ್ಯವಾಗಿ ಪ್ರಸಾದ ಅರ್ಪಿಸಲಾಯಿತು.

ಜಾತ್ರಾ ಮಹೋತ್ಸವಕ್ಕೆ ಬಂಕಾಪುರ, ಮುನವಳ್ಳಿ, ಬಾಡ, ಹೋತನಹಳ್ಳಿ, ಹಳೆ ಬಂಕಾಪುರ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

ಇದೇ ಸಂದರ್ಭದಲ್ಲಿ ಮೂರು ದಿನಗಳ ಕಾಲ ರಾಜ್ಯ ಮಟ್ಟದ ಜಂಗಿ ಬಯಲು ಕುಸ್ತಿಯನ್ನು ಆಯೋಜಿಸಲಾಗಿದ್ದು, ಕರ್ನಾಟಕ ಕೇಸರಿ, ಮಹಾರಾಷ್ಟ್ರ, ಸಾಂಗ್ಲಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಅನೇಕ ಪ್ರಶಸ್ತಿ ಪಡೆದ ಪೈಲ್ವಾನರು ಭಾಗವಹಿಸುತ್ತಿದ್ದಾರೆ.

ಪುರಾತನ ಐತಿಹಾಸಿಕ ಪ್ರಸಿದ್ಧಿ ಪಡೆದ ಉದ್ಭವ ಮೂರ್ತಿಯೆಂದು ಖ್ಯಾತಿಯಾಗಿರುವ ಶ್ರೀ ತೋಪಿನ ದುರ್ಗಾದೇವಿ ಜಾತ್ರೆಯನ್ನು ಪ್ರತಿ ವರ್ಷ ಹುಣ್ಣಿಮೆಯ ಪೂರ್ವದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಕೂಡ ಜಾತ್ರೆ ಭಕ್ತಿಭಾವ, ಸಂಪ್ರದಾಯ ಹಾಗೂ ಕ್ರೀಡಾ ವೈಭವದೊಂದಿಗೆ ನಡೆಯುತ್ತಿದೆ.

ವರದಿ: ನಿಂಗರಾಜ ಕುಡಲ್
ಸ್ಥಳ: ಬಂಕಾಪುರ, ಹಾವೇರಿ ಜಿಲ್ಲೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

1 hour ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

15 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

17 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

17 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

17 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago