ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum for Social Leaders and Achievers), ಚೆನ್ನೈ ಸಂಸ್ಥೆಯು ನೀಡುವ 2026ನೇ ಸಾಲಿನ ರಾಷ್ಟ್ರೀಯ ಸ್ವಾಮಿ ವಿವೇಕಾನಂದ ಸಂಶೋಧನೆ ಮತ್ತು ನಾವೀನ್ಯತೆ ಶ್ರೇಷ್ಠತಾ ಪ್ರಶಸ್ತಿ ಅನ್ನು ಅಭಿಷೇಕ್ ಕೆ ಅವರಿಗೆ ನೀಡಿ ಗೌರವಿಸಿದೆ.

ಹೊಸನಗರ ತಾಲೂಕಿನ ಹುಂಚ ಗ್ರಾಮದ ನಿವಾಸಿಯಾಗಿರುವ ಅಭಿಷೇಕ್ ಕೆ ಅವರು ರಿಯೋಮ್ ಎಜುಕೇಶನ್ ಅಕಾಡೆಮಿಯ ಸಂಸ್ಥಾಪಕ ಹಾಗೂ ಮುಖ್ಯಸ್ಥರಾಗಿದ್ದಾರೆ. ದೂರ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸೇವೆ, ಸಂಶೋಧನೆ ಮತ್ತು ನಾವೀನ್ಯತೆಯ ಮೂಲಕ ಸಮಾಜಮುಖಿ ಶಿಕ್ಷಣವನ್ನು ಬಲಪಡಿಸಿರುವುದನ್ನು ಗುರುತಿಸಿ ಅವರಿಗೆ ಈ ಗೌರವ ಲಭಿಸಿದೆ.

ಸ್ವಾಮಿ ವಿವೇಕಾನಂದರ ಆದರ್ಶಗಳು, ಚಿಂತನೆಗಳು ಹಾಗೂ ಯುವಶಕ್ತಿಗೆ ಪ್ರೇರಣೆಯಾಗುವ ಕಾರ್ಯಗಳನ್ನು ಮುಂದುವರೆಸುವ ಸಾಧಕರನ್ನು ಗುರುತಿಸುವ ಉದ್ದೇಶದಿಂದ ಈ ರಾಷ್ಟ್ರೀಯ ಪ್ರೇರಣಾ ಪ್ರಶಸ್ತಿಯನ್ನು ಪ್ರತಿವರ್ಷ ನೀಡಲಾಗುತ್ತದೆ. 2026ನೇ ಸಾಲಿನ “Swami Vivekananda National Inspiration Award” ಅನ್ನು ಅಭಿಷೇಕ್ ಕೆ ಅವರಿಗೆ ನೀಡುವ ಮೂಲಕ, ಅವರ ಶೈಕ್ಷಣಿಕ ನಾಯಕತ್ವ ಹಾಗೂ ಸಾಮಾಜಿಕ ಬದ್ಧತೆಯನ್ನು ಪ್ರಶಸ್ತಿ ಸಮಿತಿ ಶ್ಲಾಘಿಸಿದೆ.

ಈ ಗೌರವವು ದೂರ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು ಮತ್ತು ಯುವ ಶಿಕ್ಷಣ ನಾಯಕರಿಗೆ ಮತ್ತಷ್ಟು ಪ್ರೇರಣೆಯಾಗಿ ಪರಿಣಮಿಸಿದೆ.

ದೂರ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸೇವೆ, ಸಂಶೋಧನೆ ಮತ್ತು ನಾವೀನ್ಯತೆಯ ಮೂಲಕ ಸಮಾಜಮುಖಿ ಶಿಕ್ಷಣವನ್ನು ಬಲಪಡಿಸಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಅಭಿಷೇಕ್ ರವರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳದ ವತಿಯಿಂದ ಅಭಿನಂದನೆಗಳು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 hour ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

24 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago