MLA Belur Gopalakrishna inaugurated development works worth ₹2.69 crore in Belluru Gram Panchayat, focusing on roads, culverts, retaining walls and rural infrastructure development.
ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಗೋಪಾಲಕೃಷ್ಣ ಬೇಳೂರು
ರಿಪ್ಪನ್ಪೇಟೆ : ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹2 ಕೋಟಿ 69 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗೋಪಾಲಕೃಷ್ಣ ಬೇಳೂರು, ಶಾಸಕ, ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ಮತ್ತಿಕೊಪ್ಪ, ಗುಳಗುಳಿಶಂಕ್ರ ಗ್ರಾಮಗಳ ರಸ್ತೆ ಅಭಿವೃದ್ಧಿ, ದೋಬೈಲು ಗ್ರಾಮದಲ್ಲಿ ಕಾಲುಸಂಕ ನಿರ್ಮಾಣ ಹಾಗೂ ಮಸ್ಕಾನಿಯಲ್ಲಿ ತಡೆಗೋಡೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಅಧಿಕೃತ ಚಾಲನೆ ನೀಡಲಾಯಿತು.
ಶಂಕುಸ್ಥಾಪನೆ ಬಳಿಕ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು “ಇಲ್ಲಿನ ಜನರ ಅಗತ್ಯ ಮತ್ತು ಬೇಡಿಕೆಗಳನ್ನಾಧರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಗ್ರಾಮಸ್ಥರು ಇನ್ನೂ ಕೆಲವು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಅವನ್ನೂ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪರಿಹರಿಸಲಾಗುವುದು. ಪಂಚಾಯಿತಿಯ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ” ಎಂದು ಹೇಳಿದರು.
ಜನರ ಪ್ರೀತಿ ಮತ್ತು ಕೆಲಸ ಎರಡಕ್ಕೂ ಆದ್ಯತೆ ನೀಡುವ ರಾಜಕಾರಣ ನನ್ನದು ಎಂದು ತಿಳಿಸಿದ ಅವರು, “ನಿಮ್ಮ ಆಶೀರ್ವಾದದಿಂದ ಮೂರು ಬಾರಿ ಶಾಸಕನಾಗಿದ್ದೇನೆ. ಸಮಾಜಸೇವೆಯ ರಾಜಕಾರಣದಲ್ಲಿ ಜನರನ್ನು ಪ್ರೀತಿಸುವುದನ್ನು ಬಂಗಾರಪ್ಪನವರಿಂದ ಕಲಿತಿದ್ದೇನೆ. ಅಭಿವೃದ್ಧಿಯನ್ನು ಹೇಗೆ ಮಾಡಬೇಕು ಎಂಬುದನ್ನು ಕಾಗೋಡು ತಿಮ್ಮಪ್ಪನವರಿಂದ ಕಲಿತಿದ್ದೇನೆ. ನೊಂದವರಿಗೆ ನೆರವಾಗುತ್ತಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ” ಎಂದು ಹೇಳಿದರು.
“ಅಭಿವೃದ್ಧಿಯೇ ನನ್ನ ಮೂಲ ಮಂತ್ರ. ಭರವಸೆಗಳ ರಾಜಕಾರಣವಲ್ಲ, ಕೆಲಸದ ಮೂಲಕ ವಿಶ್ವಾಸ ಕಟ್ಟುವುದೇ ನನ್ನ ಉದ್ದೇಶ” ಎಂದು ಸ್ಪಷ್ಟಪಡಿಸಿದ ಗೋಪಾಲಕೃಷ್ಣ ಬೇಳೂರು, ಶಾಸಕ, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು. ಪಂಚ ಗ್ಯಾರಂಟಿ ಯೋಜನೆಗಳ ಜತೆಗೆ ಕ್ಷೇತ್ರಕ್ಕೆ ನೂರಾರು ಕೋಟಿ ರೂಪಾಯಿ ಅನುದಾನ ತರಲು ಸಾಧ್ಯವಾಗಿದೆ ಎಂಬ ಹೆಮ್ಮೆಯನ್ನೂ ವ್ಯಕ್ತಪಡಿಸಿದರು.
ರಸ್ತೆ, ಕುಡಿಯುವ ನೀರು, ಚರಂಡಿ, ಸಮುದಾಯ ಭವನ, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳ ಸುಧಾರಣೆಗೆ ಈ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದ ಅವರು, “ಗ್ರಾಮೀಣ ಅಭಿವೃದ್ಧಿಯಿಲ್ಲದೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಪ್ರತಿಯೊಂದು ಹಳ್ಳಿಯೂ ಸಮಾನವಾಗಿ ಬೆಳೆಯಬೇಕು” ಎಂಬ ಧ್ಯೇಯದೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಗ್ರಾಮಸ್ಥರ ದಿನನಿತ್ಯದ ಜೀವನವನ್ನು ಸುಲಭಗೊಳಿಸುವ ಜೊತೆಗೆ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಗ್ರಾ.ಪಂ.ಅಧ್ಯಕ್ಷೆ ನಾಗರತ್ನ, ಸದಸ್ಯರಾದ ಬೆಳ್ಳೂರು ತಿಮ್ಮಪ್ಪ, ರವಿ, ಮುಖಂಡರಾದ ಚಂದ್ರಮೌಳಿ, ಯೋಗೇಶ, ಬೆಳ್ಳೂರು ರವಿ, ಈಶ್ವರಪ್ಪಗೌಡ, ಉಮಾಕರ ಇನ್ನಿತರರಿದ್ದರು.
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…